ಗದಗ: ಲೋಕಸಭಾ ಚುನಾವಣೆ ಅಖಾಡದಲ್ಲಿ ಕಮಲ ಜಯಭೇರಿ ಬಾರಿಸಿದೆ. ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿಯೂ ಕಮಲ ಅರಳಿದ್ದು ಗದಗದಲ್ಲಿ ಕೇಸರಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಟಾಂಗಾ ಕೂಟ ವೃತ್ತದಲ್ಲಿ ಗದಗ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿಕೊಂಂಡು ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದ್ರು. ನರೇಂದ್ರ ಮೋದಿ ಅವರ ಅಲೆಯಿಂದಲೇ ಮತ್ತೊಮ್ಮೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಮಲ ಅರಳಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಾವು ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸುತ್ತೇವೆ ಎಂದು ಪ್ರಧಾನಿ ಮೋದಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಪಕ್ಷ ರೈತಪರ, ಜನಪರ, ಕಾರ್ಮಿಕರ ಪರವಾಗಿದೆ. ಹೀಗಾಗಿ ಜನ ಮತ್ತೊಮ್ಮೆ ನಮ್ಮ ಪಕ್ಷಕ್ಕೆ ಆಶೀರ್ವದ ಮಾಡಿದ್ದಾರೆ ಎಂದುಹರ್ಷ ವ್ಯಕ್ತಪಡಿಸಿದ್ದಾರೆ. ಮೂರನೇ ಬಾರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರು ಶುಭಕೋರಿದ್ದಾರೆ.