ಗದಗ: ಗದಗ ಬೆಟಗೇರಿ ನಗರಸಭೆ ಚುನಾವಣೆಗೆ ನೂತನ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಕಳೆದ ಮೂರು ವರ್ಷಗಳಿಂದ ನಗರಸಭೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಟ್ಟಂತಾಗಿದೆ. ಆದರೆ, ಈ ಮೀಸಲಾತಿ ಪಟ್ಟಿ ಬಿಜೆಪಿಯಲ್ಲಿ ಬೆಂಕಿ ಹೊತ್ತಿಸಿದೆ.
ಮೀಸಲಾತಿ ಪಟ್ಟಿಯಿಂದ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಕೇಳಿ ಬಂದಿದ್ದು, ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಟಿಕೆಟ್ ಆಕಾಂಕ್ಷಿಗಳು ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್, ಎಂಎಲ್ಸಿ ಎಸ್.ವಿ ಸಂಕನೂರ ವಿರುದ್ಧ ಆಕ್ರೋಶ ಕೇಳಿ ಬಂದಿದೆ. ಬಿಡುಗಡೆಯಾದ ಮೀಸಲಾತಿ ಪಟ್ಟಿ ಹಿನ್ನೆಲೆ ಹಲವು ವಾರ್ಡ್ನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನುವಂತಾಗಿದೆ.
ಈ ಹಿನ್ನೆಲೆ ಇನ್ನೆರಡು ದಿನಗಳ ಕಾಲ ಮೀಸಲಾತಿ ಕುರಿತಂತೆ ಬದಲಾವಣೆ ಸಮಯಾವಕಾಶವಿದ್ದು, ಶೀಘ್ರ ಬದಲಾವಣೆಯಾಗಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸುತ್ತಿದ್ದಾರೆ.
ಬಿಜೆಪಿ ಜಿಲ್ಲಾ ಮಟ್ಟದ ಸಭೆಯಲ್ಲೂ ಕಾರ್ಯಕರ್ತರು, ಮುಖಂಡರ ಮೀಸಲಾತಿ ಪಟ್ಟಿ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಇದೇ ಪಟ್ಟಿಯ ಅನ್ವಯ ಚುನಾವಣೆ ನಡೆದರೆ ಬಿಜೆಪಿಗೆ ಗೆಲುವು ಕಷ್ಟವಾಗಲಿದೆ ಎಂದು ಕಾರ್ಯಕರ್ತರು ಆತಂಕ ಹೊರಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಭಟ್ಕಳದಲ್ಲಿ ಬೆಳ್ಳಂಬೆಳಗ್ಗೆ 3 ಅಂಗಡಿ, ಮನೆ ದರೋಡೆ: ಬುರ್ಖಾವನ್ನೂ ಬಿಡದ ಖದೀಮರು..