ETV Bharat / state

ಪ್ರಚಾರದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ: ಸ್ಥಳದಲ್ಲಿ ಬಿಗುವಿನ ವಾತಾವರಣ

author img

By

Published : Dec 21, 2020, 3:15 PM IST

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗ್ರಾಪಂ ಚುನಾವಣೆ ಪ್ರಚಾರದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಒಂದು ಡಿಆರ್ ತುಕಡಿ ನಿಯೋಜನೆ ಮಾಡಲಾಗಿದೆ.

riot-between-the-two-groups-during-the-campaign
ಪ್ರಚಾರದ ವೇಳೆ ಎರಡು ಗುಂಪುಗಳು ನಡುವೆ ಗಲಾಟೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಗದಗ: ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗ್ರಾಪಂ ಚುನಾವಣೆ ಪ್ರಚಾರದ ವೇಳೆ ಎರಡು ಗುಂಪುಗಳು ನಡುವೆ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಚಾರದ ವೇಳೆ ಎರಡು ಗುಂಪುಗಳು ನಡುವೆ ಗಲಾಟೆ

ಪ್ರಚಾರದ ಸಮಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಇದರಿಂದ ಬಿಂಕದಕಟ್ಟಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಬಿಜೆಪಿಯವರು ನೇರ ಪೈಪೋಟಿ ಒಡ್ಡಿರುವುದೇ ಈ ಘಟನೆಗೆ ಪ್ರಮುಖ ಕಾರಣ ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಆರೋಪಿಸಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಡಿವೈಎಸ್ಪಿ ಪ್ರಹ್ಲಾದ್ ಕೆ., ಗ್ರಾಮೀಣ ಠಾಣೆ ಸಿಪಿಐ ರವಿ ಕಪ್ಪತ್ತನವರ್, ಪಿಎಸ್ಐ ಅಜಿತ್ ಕುಮಾರ್ ಹೊಸಮನಿ ಸ್ಥಳದಲ್ಲೇ ಮುಕ್ಕಾಂ ಹೂಡಿದ್ದಾರೆ. ಸದ್ಯ ಬಿಂಕದಕಟ್ಟಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಒಂದು ಡಿಆರ್ ತುಕಡಿ ನಿಯೋಜನೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.