ETV Bharat / state

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್​ ಟ್ಯಾಂಕರ್​ ಪಲ್ಟಿ: ತಪ್ಪಿದ ಭಾರೀ ಅನಾಹುತ

author img

By

Published : May 17, 2020, 3:38 PM IST

gas tanker accident
ಗ್ಯಾಸ್​ ಟ್ಯಾಂಕರ್​ ಪಲ್ಟಿ

ಹಾಸನದ ಆಲೂರು ತಾಲೂಕಿನ ಭರತವಳ್ಳಿ ಗ್ರಾಮದ ಕೆರೆ ಸಮೀಪದ ತಿರುವಿನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್​​​​ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆಲೂರು (ಹಾಸನ): ಚಾಲಕನ ಅಜಾಗರೂಕತೆಯಿಂದ ಗ್ಯಾಸ್ ಟ್ಯಾಂಕರ್​​​ವೊಂದು ಪಲ್ಟಿಯಾಗಿದ್ದು ಜರುಗಬೇಕಿದ್ದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿರುವ ಘಟನೆ ಹಾಸನದ ಆಲೂರಿನಲ್ಲಿ ನಡೆದಿದೆ.

ಗ್ಯಾಸ್​ ಟ್ಯಾಂಕರ್​ ಪಲ್ಟಿ

ತಾಲೂಕಿನ ಭರತವಳ್ಳಿ ಗ್ರಾಮದ ಕೆರೆ ಸಮೀಪದ ತಿರುವಿನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್​​​ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅತಿ ವೇಗದ ಚಾಲನೆಯೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಲೀಕ್ ಆಗದಂತೆ ತಡೆದು ದೊಡ್ಡ ಮಟ್ಟದ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಎಸ್​ಪಿ ಆರ್. ಶ್ರೀನಿವಾಸಗೌಡ ಹಾಗೂ ಆಲೂರು ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.