ETV Bharat / state

ಸಂತ್ರಸ್ತರ ಮನೆ ನಿರ್ಮಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿಲು ಟಿ.ಕೆ.ಅನಿಲ್‍ ಕುಮಾರ್​ ಸೂಚನೆ

author img

By

Published : Jan 22, 2020, 2:37 PM IST

meeting
ಸಭೆ

ಜಿಲ್ಲೆಯಲ್ಲಿ ಪ್ರವಾಹದಿಂದ ಸಂಭವಿಸಿದ್ದ ಬೆಳೆ ಹಾನಿಗೆ ಇನ್‍ಪುಟ್ ಸಬ್ಸಿಡಿ ವಿತರಿಸುವ ಬಗ್ಗೆ ಮತ್ತು 2020-21 ನೇ ಸಾಲಿನಲ್ಲಿ ನಡೆಯಲಿರುವ ಜನಗಣತಿ ಕುರಿತಂತೆ ಪೂರ್ವಭಾವಿ ತಯಾರಿಯ ಕುರಿತಾಗಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‍ ಕುಮಾರ್ ಸಲಹೆ ಸೂಚನೆಗಳನ್ನು ನೀಡಿದರು.

ಹಾಸನ : ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರ ಮನೆಗಳಿಗೆ ಎರಡನೇ ಹಂತದ ಹಣ ಬಿಡುಗಡೆ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿರಿ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‍ ಕುಮಾರ್ ಹೇಳಿದ್ದಾರೆ

ಸಭೆ

ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ಮೂಲಭೂತ ಸೌಕರ್ಯಗಳ ದುರಸ್ಥಿ ಮತ್ತು ಪುನರ್ ನಿರ್ಮಾಣ ಪ್ರಗತಿ ಕುರಿತ ವರದಿ ಪಡೆದರಲ್ಲದೆ, ಪ್ರವಾಹದಿಂದ ಉಂಟಾದ ಬೆಳೆ ಹಾನಿಗೆ ಇನ್‍ಪುಟ್ ಸಬ್ಸಿಡಿ ವಿತರಿಸುವ ಬಗ್ಗೆ ಮತ್ತು 2020-21 ನೇ ಸಾಲಿನಲ್ಲಿ ನಡೆಯಲಿರುವ ಜನಗಣತಿ ಕುರಿತಂತೆ ಪೂರ್ವಭಾವಿ ತಯಾರಿಯ ಕುರಿತಾಗಿ ಅವರು ಸಲಹೆ ಸೂಚನೆಗಳನ್ನು ನೀಡಿದರು.

ಸಂತ್ರಸ್ತರ ಜಿಲ್ಲೆಯಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಜಿ.ಪಿ.ಎಸ್ ಮಾಡಿ ಎರಡನೇ ಹಂತದ ಹಣ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಮುಂದುವರೆಸುವಂತೆ ಹೇಳಿದರು. ಮೂಲಭೂತ ಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ ಹಣ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ, ಪಿ.ಆರ್.ಇ.ಡಿ., ಪಿ.ಡ್ಲ್ಯೂ.ಡಿ., ಗ್ರಾಮೀಣ ರಸ್ತೆ ದುರಸ್ಥಿ ಕಾರ್ಯಗಳಿಗೆ ಸಂಪೂರ್ಣವಾಗಿ ಹಣ ಬಳಕೆ ಮಾಡಿಕೊಂಡು ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಪ್ರವಾಹದಿಂದ ಹಾನಿಗೊಳಗಾದ ರೈತರ ಬೆಳೆಗೆ ಸರ್ಕಾರದಿಂದ ಇನ್‍ಪುಟ್ ಸಬ್ಸಿಡಿಯನ್ನು ಹಂತಹಂತವಾಗಿ ವಿತರಿಸಲಾಗುವುದು ಎಂದರಲ್ಲದೆ, ಶಾಲೆ ಮತ್ತು ಅಂಗನವಾಡಿಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಮುಗಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಯವರು ಸೂಚನೆ ನೀಡಿದ್ದಾರೆ.

2021ರಲ್ಲಿ ನಡೆಯಲಿರುವ ಆರ್ಥಿಕ ಜನಗಣತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಈ ಬಾರಿಯ ಜನಗಣತಿಯನ್ನು ಮೊಬೈಲ್ ಆ್ಯಪ್ ಮೂಲಕ ನಡೆಸುತ್ತಿದ್ದು, ಗಣತಿದಾರರಿಗೆ ಹೆಚ್ಚಿನ ಸಂಭಾವನೆ ದೊರೆಯಲಿದೆ ಎಂದು ಮಾಹಿತಿ ತಿಳಿಸಿದರು.

ವಿಡಿಯೋ ಸಂವಾದದ ನಂತರ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ಶಾಲೆ ಮತ್ತು ಅಂಗನವಾಡಿಗಳ ದುರಸ್ಥಿ-ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ 752 ಕಾಮಗಾರಿಗಳಲ್ಲಿ 98 ಪೂರ್ಣಗೊಂಡಿವೆ. 639 ಕಾಮಗಾರಿಗಳು ಪ್ರಗತಿ ಹಂತದಲ್ಲಿದ್ದು, ಉಳಿದ 15 ಕಾಮಗಾರಿಗಳನ್ನು ಶೀಘ್ರವಾಗಿ ಆರಂಭಿಸುವಂತೆ ಪಿ.ಆರ್.ಇ.ಡಿ ಇಂಜಿನಿಯರ್​ ಸೂಚಿಸಿದರು.

2020-21ರಲ್ಲಿ ನಡೆಯಲಿರುವ ಜನಗಣತಿಗೆ ಗಣತಿದಾರರು ಮತ್ತು ಮೇಲ್ವೀಚಾರಕರನ್ನು ನೇಮಕ ಮಾಡಲು ಆಯ್ಕೆ ಪಟ್ಟಿ ತಯಾರಿಸುವಂತೆ ಜನಗಣತಿಯ ಜಿಲ್ಲಾ ನೋಡಲ್ ಅಧಿಕಾರಿಗೆ ತಿಳಿಸಿದರಲ್ಲದೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳನ್ನು ಗಣತಿ ಕಾರ್ಯಕ್ಕೆ ನಿಯೋಜನೆ ಮಾಡಲು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಎ ಕೆಟಗರಿಯ 184 ಮನೆಗಳಲ್ಲಿ ಮತ್ತು ಬಿ ಕೆಟಗರಿಯ 975 ಮನೆಗಳಿದ್ದು, ಅವುಗಳ ಕಾಮಗಾರಿಯನ್ನು ಪೂರ್ಣ ಮಾಡುವಂತೆ ತಿಳಿಸಿದರು. ಜಿಲ್ಲೆಯ ಗ್ರಾಮಾಂತರದಲ್ಲಿ 38 ಹಾಗೂ ಪಟ್ಟಣ ಪ್ರದೇಶದಲ್ಲಿ 12 ಸೇರಿದಂತೆ ಒಟ್ಟು 50 ಬ್ಲಾಕುಗಳಿವೆ. ಅವುಗಳಿಗೆ ಅರೆಕಾಲಿಕ ಗಣತಿದಾರರನ್ನು ನೇಮಿಸಲಾಗುವುದು ಮತ್ತು ಗಣತಿದಾರರಿಗೆ ಜಿಲ್ಲಾ ಮಟ್ಟದಲ್ಲಿ ಫೆ.3ರಂದು ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.

Intro:ಹಾಸನ : ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ಥರ ಮನೆಗಳಿಗೆ ಎರಡನೇ ಹಂತದ ಹಣ ಬಿಡುಗಡೆ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿರಿ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‍ಕುಮಾರ್ ಹೇಳಿದ್ದಾರೆ.
         ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ಮೂಲಭೂತ ಸೌಕರ್ಯಗಳ ದುರಸ್ಥಿ ಮತ್ತು ಪುನರ್ ನಿರ್ಮಾಣ ಪ್ರಗತಿ ಕುರಿತ ವರದಿ ಪಡೆದರಲ್ಲದೆ, ಪ್ರವಾಹದಿಂದ ಉಂಟಾದ ಬೆಳೆ ಹಾನಿಗೆ ಇನ್‍ಪುಟ್ ಸಬ್ಸಿಡಿ ವಿತರಿಸುವ ಬಗ್ಗೆ ಮತ್ತು 2020-21 ನೇ ಸಾಲಿನಲ್ಲಿ ನಡೆಯಲಿರುವ ಜನಗಣತಿ ಕುರಿತಂತೆ ಪೂರ್ವಭಾವಿ ತಯಾರಿಯ ಕುರಿತಾಗಿ ಅವರು ಸಲಹೆ ಸೂಚನೆಗಳನ್ನು ನೀಡಿದರು.
         ಸಂತ್ರಸ್ಥರ ಜಿಲ್ಲೆಯಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಜಿ.ಪಿ.ಎಸ್ ಮಾಡಿ ಎರಡನೆ ಹಂತದ ಹಣ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಮುಂದುವರೆಸುವಂತೆ ಹೇಳಿದರು.
         ಮೂಲಭೂತ ಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ ಹಣ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ, ಪಿ.ಆರ್.ಇ.ಡಿ., ಪಿ.ಡ್ಲ್ಯೂ.ಡಿ., ಗ್ರಾಮೀಣ ರಸ್ತೆ ದುರಸ್ಥಿ ಕಾರ್ಯಗಳಿಗೆ ಸಂಪೂರ್ಣವಾಗಿ ಹಣ ಬಳಕೆ ಮಾಡಿಕೊಂಡು ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿರೆಂದು ಸೂಚಿಸಿದರು.
         ಪ್ರವಾಹದಿಂದ ಹಾನಿಗೊಳಗಾದ ರೈತರ ಬೆಳೆಗೆ ಸರ್ಕಾರದಿಂದ ಇನ್‍ಪುಟ್ ಸಬ್ಸಿಡಿಯನ್ನು ಹಂತಹಂತವಾಗಿ ವಿತರಿಸಲಾಗುವುದು ಎಂದರಲ್ಲದೆ, ಶಾಲೆ ಮತ್ತು ಅಂಗನವಾಡಿಗಳ ದುರಸ್ಥಿ ಕಾರ್ಯವನ್ನು ಶೀಘ್ರವಾಗಿ ಮುಗಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಯವರು ಸೂಚನೆ ನೀಡಿದ್ದಾರೆ.
         2021ರಲ್ಲಿ ನಡೆಯಲಿರುವ ಆರ್ಥಿಕ ಜನಗಣತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಈ ಬಾರಿಯ ಜನಗಣತಿಯನ್ನು ಮೊಬೈಲ್ ಆ್ಯಪ್ ಮೂಲಕ ನಡೆಸುತ್ತಿದ್ದು, ಗಣತಿದಾರರಿಗೆ ಹೆಚ್ಚಿನ ಸಂಭಾವನೆ ದೊರೆಯಲಿದೆ ಎಂದು ಮಾಹಿತಿ ತಿಳಿಸಿದರು.
ವಿಡಿಯೋ ಸಂವಾದದ ನಂತರ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ಶಾಲೆ ಮತ್ತು ಅಂಗನವಾಡಿಗಳ ದುರಸ್ಥಿ-ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ 752 ಕಾಮಗಾರಿಗಳಲ್ಲಿ 98 ಪೂರ್ಣಗೊಂಡಿವೆ. 639 ಕಾಮಗಾರಿಗಳು ಪ್ರಗತಿ ಹಂತದಲ್ಲಿದ್ದು, ಉಳಿದ 15 ಕಾಮಗಾರಿಗಳನ್ನು ಶೀಘ್ರವಾಗಿ ಆರಂಭಿಸುವಂತೆ ಪಿ.ಆರ್.ಇ.ಡಿ ಇಂಜಿನಿಯರ್‍ಗೆ ಸೂಚಿಸಿದರು.
         2020-21ರಲ್ಲಿ ನಡೆಯಲಿರುವ ಜನಗಣತಿಗೆ ಗಣತಿದಾರರು ಮತ್ತು ಮೇಲ್ವೀಚಾರಕರನ್ನು ನೇಮಕ ಮಾಡಲು ಆಯ್ಕೆ ಪಟ್ಟಿ ತಯಾರಿಸುವಂತೆ ಜನಗಣತಿಯ ಜಿಲ್ಲಾ ನೋಡಲ್ ಅಧಿಕಾರಿಗೆ ತಿಳಿಸಿದರಲ್ಲದೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳನ್ನು ಗಣತಿ ಕಾರ್ಯಕ್ಕೆ ನಿಯೋಜನೆ ಮಾಡಲು ಜಿಲ್ಲಾಧಿಕಾರಿಯವರು ಸೂಚಿಸಿದರು.
         ಜಿಲ್ಲೆಯಲ್ಲಿ ಎ ಕೆಟಗರಿಯ 184 ಮನೆಗಳಲ್ಲಿ ಮತ್ತು ಬಿ ಕೆಟಗರಿಯ 975 ಮನೆಗಳಿದ್ದು, ಅವುಗಳ ಕಾಮಗಾರಿಯನ್ನು ಪೂರ್ಣ ಮಾಡುವಂತೆ ತಿಳಿಸಿದರು.
         ಜಿಲ್ಲೆಯ ಗ್ರಾಮಾಂತರದಲ್ಲಿ 38 ಹಾಗೂ ಪಟ್ಟಣ ಪ್ರದೇಶದಲ್ಲಿ 12 ಸೇರಿದಂತೆ ಒಟ್ಟು 50 ಬ್ಲಾಕುಗಳಿವೆ. ಅವುಗಳಿಗೆ ಅರೆಕಾಲಿಕ ಗಣತಿದಾರರನ್ನು ನೇಮಿಸಲಾಗುವುದು ಮತ್ತು ಗಣತಿದಾರರಿಗೆ ಜಿಲ್ಲಾ ಮಟ್ಟದಲ್ಲಿ ಫೆ.3ರಂದು ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.
         
ಬೈಟ್ : ಆರ್. ಗಿರೀಶ್, ಜಿಲ್ಲಾಧಿಕಾರಿ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.


Body:೦


Conclusion:೦
ETV Bharat Logo

Copyright © 2024 Ushodaya Enterprises Pvt. Ltd., All Rights Reserved.