ETV Bharat / state

ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ: ಪ್ರೀತಮ್​ ಗೌಡ

author img

By

Published : Jun 13, 2022, 9:46 PM IST

our-party-candidates-would-win-preetham-gowda
ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ: ಪ್ರೀತಮ್​ ಗೌಡ

ಈ ಬಾರಿ ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ರವಿಶಂಕರ್ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.

ಹಾಸನ/ಹೊಳೆನರಸೀಪುರ: ಪ್ರಬುದ್ಧ ಮತದಾರರು ಎಂದಿಗೂ ಪಕ್ಷವನ್ನು ಕೈಬಿಡುವುದಿಲ್ಲ. ಈ ಬಾರಿ ಸಾವಿರ ಮತಗಳಿಗಿಂತ ಅಧಿಕ ಅಂತರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹಾಸನದ ಶಾಸಕ ಪ್ರೀತಮ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಗಂಧದ ಕೋಟೆಯ ಬಳಿ ಇರುವ ಸರ್ಕಾರಿ ಕಾಲೇಜಿನ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ನಮ್ಮ ಪಕ್ಷದ ಅಭ್ಯರ್ಥಿ ಕೇವಲ 150 ಮತಗಳ ಅಂತರಗಳಿಂದ ಪರಾಭವಗೊಂಡಿದ್ದರು. ಆಗ ಮೈಸೂರು ಭಾಗದಲ್ಲಿ ನಮ್ಮ ಪ್ರಾಬಲ್ಯ ಇಲ್ಲದಿದ್ದರಿಂದ ಚುನಾವಣೆಯಲ್ಲಿ ಸೋಲನುಭವಿಸಿದ್ದರು ಎಂದರು.


ಅರಸೀಕೆರೆ ಮತ್ತು ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ಶಾಸಕರಾದ ಸಿಎಂ ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಕೆ.ಎಂ.ಶಿವಲಿಂಗೇಗೌಡ ಹಾಗೂ ಸಕಲೇಶಪುರದಲ್ಲಿ ಹೆಚ್.ಕೆ.ಕುಮಾರಸ್ವಾಮಿ ತಮ್ಮ ಹಕ್ಕು ಚಲಾಯಿಸಿದರು.

ಇದನ್ನೂ ಓದಿ : ಪರಿಷತ್ ಚುನಾವಣೆ: ಮತದಾನ ಆರಂಭ, ಧಾರವಾಡದಲ್ಲಿ ಪತ್ನಿ ಸಮೇತ ಮತಗಟ್ಟೆಗೆ ಬಂದ ಅಭ್ಯರ್ಥಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.