ETV Bharat / state

ಲಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್​ಟಿಸಿ ಬಸ್.. 12ಕ್ಕೂ ಅಧಿಕ ಮಂದಿಗೆ ಗಾಯ

author img

By

Published : Nov 10, 2022, 7:25 PM IST

road-accident-in-hasana
ಲಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್​ಟಿಸಿ ಬಸ್ : 12ಕ್ಕೂ ಅಧಿಕ ಮಂದಿಗೆ ಗಾಯ

ಕೆಎಸ್ಆರ್​ಟಿಸಿ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ : ಕೆಎಸ್ಆರ್​ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣ್ಣೇನಳ್ಳಿ-ಜೋಡಿಗಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಓರ್ವ ಪತ್ರಕರ್ತನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕೆಎಸ್ಆರ್​ಟಿಸಿ ಬಸ್ ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.