ETV Bharat / state

ಹಾವೇರಿ: ಇಬ್ಬರು ಬೈಕ್‌ ಕಳ್ಳರು ಅರೆಸ್ಟ್, 13 ಬೈಕ್ ವಶಕ್ಕೆ

author img

By ETV Bharat Karnataka Team

Published : Nov 9, 2023, 9:37 AM IST

Haveri theft news
ಹಾವೇರಿ ಕಳ್ಳತನ ಸುದ್ದಿ

ಹಾವೇರಿ, ದಾವಣಗೆರೆ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಿಗೆ ಪೊಲೀಸರು ಬಲೆ ಹಾಕಿದ್ದಾರೆ.

ಹಾವೇರಿ: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬ್ಯಾಡಗಿ ಪೊಲೀಸರು ಬಂಧಿಸಿ, 13 ಬೈಕ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 23 ವರ್ಷದ ಸಾಹಿಲ್ ಭಾಷಾಸಾಬ್ ಬಾವಿಕಟ್ಟಿ ಮತ್ತು ಮಹ್ಮದಸಾಧಿಕ್ ಸೈಫುಲ್ಲಾಸಾಬ್ ಆರೋಪಿಗಳೆಂದು ಗುರುತಿಸಲಾಗಿದೆ.

ಬೆಲೆಬಾಳುವ ಬೈಕ್‌ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ಯಾರೂ ಇಲ್ಲದೇ ಇರುವುದನ್ನು ಗಮನಿಸಿ ಕಳ್ಳತನ ಮಾಡುತ್ತಿದ್ದರು. ಬ್ಯಾಡಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೃತ್ಯ ಎಸಗಿದ್ದರು. ಈ ಕುರಿತಂತೆ ಹಲವು ಪ್ರಕರಣಗಳು ದಾಖಲಾಗಿದ್ದರಿಂದ ಬ್ಯಾಡಗಿ ಸಿಪಿಐ ಮಾಲತೇಶ ಲಂಬಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿ, ಕಳ್ಳರನ್ನು ಅರೆಸ್ಟ್ ಮಾಡಿದ್ದು, 8 ಲಕ್ಷ ಮೌಲ್ಯದ ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಚನ್ನಗಿರಿ ಮನೆಗಳ್ಳತನ ಪ್ರಕರಣ
ಚನ್ನಗಿರಿ ಮನೆಗಳ್ಳತನ ಪ್ರಕರಣ

ದಾವಣಗೆರೆಯಲ್ಲಿ ಮನೆಗಳ್ಳರು ಪೊಲೀಸ್ ಬಲೆಗೆ: ಮನೆಗೆ ಬೀಗ ಜಡಿದು ಮಂಡಕ್ಕಿ ಬೋಂಡಾ ವ್ಯಾಪಾರ ಮಾಡಲು ತೆರಳಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳನನ್ನು ಪೊಲೀಸರು ಬಂಧಿಸಿ, 4.50 ಲಕ್ಷ ರೂ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಕಾಳಮ್ಮನ ಬೀದಿಯಲ್ಲಿರುವ ಮಾಲೀಕ ಮಂಜುನಾಥ್ ಮನೆಯಲ್ಲಿ ಅಕ್ಟೋಬರ್ 18ರಂದು ಕಳ್ಳತನ ಆಗಿತ್ತು. ಮಂಜುನಾಥ್ ಹಾಗೂ ಜ್ಯೋತಿ ದಂಪತಿ ಎಂದಿನಂತೆ ಮಂಡಕ್ಕಿ ಬೋಂಡಾ ವ್ಯಾಪಾರಕ್ಕೆಂದು ತಮ್ಮ ಮನೆಗೆ ಬೀಗ ಹಾಕಿಕೊಂಡು ವ್ಯಾಪಾರಕ್ಕೆ ತೆರಳಿದ್ದರು. ಇದನ್ನೇ ಕಾಯುತ್ತಿದ್ದ ಕಳ್ಳರು ಮಂಜುನಾಥ್ ಮನೆ ಬೀಗ ಮುರಿದು ಬೀರುವಿನಲ್ಲಿದ್ದ ಒಟ್ಟು 4,61,000 ರೂ ಬೆಲೆಯ 132 ಗ್ರಾಂ ಬಂಗಾರದ ಒಡವೆಗಳು ಸೇರಿದಂತೆ 15,000 ರೂ ಬೆಲೆಬಾಳುವ 250 ಗ್ರಾಂ ಬೆಳ್ಳಿ ಹಾಗೂ 01 ಲಕ್ಷ ನಗದು ಹಣ ದೋಚಿದ್ದರು. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚನ್ನಗಿರಿ ಪಟ್ಟಣದ ನಿವಾಸಿಯಾದ ಆರೋಪಿ ಮೊಹಮ್ಮದ್ ಗೌಸ್ ಎಸ್.ಅಲಿಯಾಸ್ ಅಸ್ಲಾಂ (32) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳ್ಳತನ ಮಾಡಿದ್ದ ಒಟ್ಟು 4,50,000 ರೂ ಬೆಲೆಬಾಳುವ 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿವಿಧ ಠಾಣೆಯಲ್ಲಿ ಆರೋಪಿ ಮೇಲಿವೆ ಪ್ರಕರಣಗಳು: ಆರೋಪಿ ಮೇಲೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಠಾಣೆ, ಚಿತ್ರದುರ್ಗ ನಗರ ಠಾಣೆಯಲ್ಲಿ ವಿವಿಧ ಪ್ರಕರಣ ದಾಖಲಾಗಿವೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪ್ರಕರಣ ಭೇದಿಸಿದ ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ಪ್ರಶಾಂತ್ ಜಿ.ಮುನ್ನೋಳಿ ಹಾಗೂ ಅವರ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ ಕುಮಾರ ಎಂ.ಸಂತೋಷ ಶ್ಲಾಘಿಸಿದರು.

ಇದನ್ನೂ ಓದಿ: ಬೆಂಗಳೂರು: ಮಾಹಿತಿದಾರನೆಂದು ಪೊಲೀಸರಿಗೆ ವಂಚಿಸುತ್ತಿದ್ದ ಆಟೋ ಚಾಲಕ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.