ರಾಣೆಬೆನ್ನೂರ: ಉಪ ಚುನಾವಣೆ ಕದನ ತೀವ್ರ ಕುತೂಹಲ ಮೂಡಿಸಿದ್ದು, ನಾಮಪತ್ರ ಸಲ್ಲಿಕೆ ಜೋರಾಗಿದೆ. ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಇಂದು ಕೆಲವು ಮುಖಂಡರ ಜತೆ ಸೇರಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾದ ಹಿನ್ನೆಲೆಯಲ್ಲಿ ಅಂದು ಅಪಾರ ಕಾರ್ಯಕರ್ತರು ಹಾಗೂ ಮುಖಂಡರ ಸಾರಥ್ಯದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಾಗುತ್ತದೆ ಎನ್ನಲಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಗುತ್ತೂರು ಕೂಡ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇದರಿಂದ ಸೋಮವಾರ ನಗರದಲ್ಲಿ ನಾಮಪತ್ರ ಸಲ್ಲಿಸುವ ಭರಾಟೆ ಜೋರಾಗುವ ಲಕ್ಷಣ ಕಂಡು ಬರುತ್ತಿದೆ.