ETV Bharat / state

ಐಕ್ಯತಾ ಯಾತ್ರೆಗೆ ತೆರಳುತ್ತಿದ್ದ ಕಾಂಗ್ರೆಸ್​​ ಕಾರ್ಯಕರ್ತರ ಬಸ್​ ಪಲ್ಟಿ...

author img

By

Published : Oct 12, 2022, 5:22 PM IST

Kn_hvr_02_c
ಕಾಂಗ್ರೆಸ್​​ ಕಾರ್ಯಕರ್ತರಿದ್ದ ಬಸ್​ ಪಲ್ಟಿ

ಭಾರತ್​ ಜೋಡೋ ಯಾತ್ರೆಗೆ ತೆರಳುತ್ತಿದ್ದ ಕಾಂಗ್ರೆಸ್​​ ಕಾರ್ಯಕರ್ತರ ಬಸ್​​ ಪಲ್ಟಿಯಾಗಿ, ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಹಾವೇರಿ: ಚಳ್ಳಕೆರೆಯಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯ ಪಾದಯಾತ್ರೆಗೆ ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಸ್​​ವೊಂದು ಪಲ್ಟಿಯಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹುಲುಬಿಕೊಂಡ ಗ್ರಾಮದಲ್ಲಿ ನಡೆದಿದೆ. ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮ ಪಂಚಾಯಿತಿಯಿಂದ ಭಾರತ ಐಕ್ಯತಾ ಯಾತ್ರೆಗೆ ಹೊರಟ ಕಾಂಗ್ರೆಸ್​​ ಕಾರ್ಯಕರ್ತರ ಬಸ್, ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.

ಬಸ್​​​ನಲ್ಲಿದ್ದ ಕಾರ್ಯಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಸ್ಥಳೀಯರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಕಾರ್ಯಕರ್ತರಿಗೆ ಬೇರೇ ವಾಹನದ ವ್ಯವಸ್ಥೆ ಮಾಡಿಕೊಡಲಾಗಿದೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಜನ ಸೇರಿಸದವರಿಗೆ ಟಿಕೆಟ್ ಕೈ ತಪ್ಪುವ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.