ರಾಣೆಬೆನ್ನೂರ: ಚುನಾವಣೆ ಪ್ರಕ್ರಿಯೆ ಪ್ರಾರಂಭವಾದ ನಂತರ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಭಾಗಿಯಾಗುವುದಕ್ಕೆ ಬರುವುದಿಲ್ಲ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ನಗರದ ತಮ್ಮ ಸ್ವಗೃಹದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಈ ಬಾರಿ ಉಪಚುನಾವಣೆಯಲ್ಲಿ ಜನರು ಬಿಜೆಪಿ ಪಕ್ಷವನ್ನು ದೂರಮಾಡಲಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು. ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬ ಪ್ರಶ್ನೆಗೆ, ಹೈಕಮಾಂಡ್ ಟಿಕೆಟ್ ಯಾರಿಗೆ ನೀಡುತ್ತದೋ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಒಂದು ವೇಳೆ ನನಗೆ ಕೊಟ್ರೆ ನಾನೇ ಸ್ಪರ್ಧಿಸುತ್ತೇನೆ ಇಲ್ಲ ನನ್ನ ಮಗನಿಗೆ ಕೊಟ್ರೆ ಅವನು ಸ್ಪರ್ಧಿಸುತ್ತಾನೆ ಎಂದು ತಿಳಿಸಿದ್ದಾರೆ.