ETV Bharat / state

ಶಿಗ್ಗಾವಿಯಲ್ಲಿ ಚಿನ್ನಿದಾಂಡು ಆಟದ ವೇಳೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

author img

By

Published : Jun 2, 2022, 9:14 AM IST

ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಎಪಿಎಂಸಿ ಬಳಿ ನಡೆದಿದೆ.

ಓರ್ವನ ಕೊಲೆ
ಓರ್ವನ ಕೊಲೆ

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಬುಧವಾರ ಸಂಜೆ ಚಿನ್ನಿದಾಂಡು ಆಡುತ್ತಿದ್ದ ಐವರು ಹಾಗೂ ವಾಹನ ಮಾಲೀಕನ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಉಮೇಶ್ ಶಿವಜೋಗಿ ಮಠ (40) ಮೃತ ವ್ಯಕ್ತಿ.

ಬುಧವಾರ ಸಂಜೆ ಎಪಿಎಂಸಿ ಬಳಿಯ ವೇ ಬ್ರಿಡ್ಜ್ ಹತ್ತಿರ ಕೆಲವು ಹುಡುಗರು ಚಿನ್ನಿದಾಂಡು ಆಡುತ್ತಿದ್ದರು. ಈ ವೇಳೆ ಚಿನ್ನಿ, ಉಮೇಶನ ಟಿಪ್ಪರ್​ಗೆ ಬಂದು ಬಡಿದಿದ್ದು, ಜಗಳ ಶುರುವಾಗಿದೆ. ಕೋಪಗೊಂಡು ಐದಾರು ಜನ ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಉಮೇಶ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಹಾವೇರಿ ಎಸ್​ಪಿ ಹನುಮಂತರಾಯ ಹಾಗೂ ಶಿಗ್ಗಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಮೇಲೆ ಟೊಮೆಟೊ ಬಾಕ್ಸ್​, ಕೆಳಗೆ ರಕ್ತಚಂದನವಿಟ್ಟು ಸಾಗಣೆ.. ಹೊಸಕೋಟೆಯಲ್ಲಿ 600ಕೆಜಿ ರೆಡ್​ ಸ್ಯಾಂಡಲ್ ವಶಕ್ಕೆ ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.