ಹಾವೇರಿ: ಬಿಜೆಪಿ ನೀತಿಗಳಿಂದ ಜನ ಭ್ರಮನಿರಶನವಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಬಿ.ಕೋಳಿವಾಡ ಆರೋಪಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ ಬಿಜೆಪಿ ಸೋಲು ಕಾಣಲಿದೆ. ಬಿಜೆಪಿ ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಎಲ್ಲ ರಂಗಗಳಲ್ಲಿ ಬಿಜೆಪಿ ಫೇಲಾಗಿದ್ದು, ದೇಶದಲ್ಲಿ ಕೊರೊನಾ ಈ ಮಟ್ಟಿಗೆ ಬೆಳೆಯಲು ಬಿಜೆಪಿ ಸರ್ಕಾರವೇ ಕಾರಣ ಎಂದು ಕೋಳಿವಾಡ ಆರೋಪಿಸಿದರು.
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾಂಗ್ರೆಸ್ಸಿನ ಎಲ್ಲ ಮುಖಂಡರು ಒಟ್ಟಾಗಿ ಕೆಲಸ ಮಾಡುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ.