ETV Bharat / state

ಹಾನಗಲ್​ ಉಪಚುನಾವಣೆ : ಕಾಂಗ್ರೆಸ್​ನಿಂದ ಬಹಿರಂಗ ಸಮಾವೇಶ

author img

By

Published : Oct 27, 2021, 7:14 PM IST

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಹಾನಗಲ್​​ ತಾಲೂಕಾ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿತ್ತು. ಈ ಸಮಾವೇಶದಲ್ಲಿ ಕಾಂಗ್ರೆಸ್​ನ ಪ್ರಮುಖ ನಾಯಕರು ಭಾಗವಹಿಸಿದ್ದರು..

ಕಾಂಗ್ರೆಸ್​ನಿಂದ ಬಹಿರಂಗ ಸಮಾವೇಶ
ಕಾಂಗ್ರೆಸ್​ನಿಂದ ಬಹಿರಂಗ ಸಮಾವೇಶ

ಹಾವೇರಿ : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಲಾರಂಭಿಸಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಬಹಿರಂಗ ಸಮಾವೇಶ ಹಮ್ಮಿಕೊಂಡಿತ್ತು.

ಕಾಂಗ್ರೆಸ್​ನಿಂದ ಬಹಿರಂಗ ಸಮಾವೇಶ

ನಗರದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಸಮಾವೇಶಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್​​, ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್ ಸೇರಿ ವಿವಿಧ ಮುಖಂಡರು ಪಾಲ್ಗೊಂಡಿದ್ದರು. ಸಭೆಯಲ್ಲಿ ತಮ್ಮ ಅಭ್ಯರ್ಥಿ ಶ್ರೀನಿವಾಸ್​​ ಮಾನೆ ಪರ ಮತಯಾಚಿಸಿದರು. ಸಭೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.