ETV Bharat / state

ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದರೆ ಜನ ಮಣ್ಣು ತಿನ್ನಬೇಕಾಗಿತ್ತೇನೋ: ಬೊಮ್ಮಾಯಿ ತಿರುಗೇಟು

author img

By

Published : Aug 29, 2020, 3:35 PM IST

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಿದ್ದರೆ ಮಣ್ಣು ತಿನ್ನಬೇಕಾಗುತ್ತಿತ್ತೇನೋ.. ಆದರೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಸರ್ಕಾರವಿದೆ, ಯಾರೂ ಮಣ್ಣು ತಿನ್ನಬೇಕಾಗಿಲ್ಲ ಎಂದು ಬೊಮ್ಮಾಯಿ ತಿಳಿಸಿದರು. ಸಿದ್ದರಾಮಯ್ಯ ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಆರ್ಥಿಕ ತಿಳುವಳಿಕೆ ಇದ್ದವರು. ರಾಜ್ಯದಲ್ಲಿ 13 ಬಾರಿ ಬಜೆಟ್ ಮಂಡಿಸಿದವರು. ಇಂಥವರು ಜಿಎಸ್​​ಟಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಬೊಮ್ಮಾಯಿ ತಿಳಿಸಿದರು.

former-cm-siddaramaiah-tweet-response-home-minister
ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದರೆ ರಾಜ್ಯದ ಜನ ಮಣ್ಣು ತಿನ್ನಬೇಕಾಗಿತ್ತೇನೋ: ಬೊಮ್ಮಾಯಿ ತಿರುಗೇಟು

ಹಾವೇರಿ: ಕೇಂದ್ರ ಸರ್ಕಾರ ಜಿಎಸ್​​ಟಿ ನೀಡದಿದ್ದರೆ ರಾಜ್ಯದ ಜನ ಮಣ್ಣು ತಿನ್ನಬೇಕಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದರೆ ರಾಜ್ಯದ ಜನ ಮಣ್ಣು ತಿನ್ನಬೇಕಾಗಿತ್ತೇನೋ: ಬೊಮ್ಮಾಯಿ ತಿರುಗೇಟು

ಹಾವೇರಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಿದ್ದರೆ ಮಣ್ಣು ತಿನ್ನಬೇಕಾಗುತ್ತಿತ್ತೇನೂ, ಆದರೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಸರ್ಕಾರವಿದೆ ಯಾರೂ ಮಣ್ಣು ತಿನ್ನಬೇಕಾಗಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಆರ್ಥಿಕ ತಿಳುವಳಿಕೆ ಇದ್ದವರು. ರಾಜ್ಯದಲ್ಲಿ 13 ಬಾರಿ ಬಜೆಟ್ ಮಂಡಿಸಿದವರು. ಇಂಥವರು ಜಿಎಸ್​​ಟಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಬೊಮ್ಮಾಯಿ ತಿಳಿಸಿದರು.

ಜಿಎಸ್​​ಟಿ ಕುರಿತಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಜೊತೆ ಚರ್ಚಿಸಿದೆ. ರಾಜ್ಯದ ಪಾಲು ಸೇರಿದಂತೆ ಸೆಸ್ ಸಹ ರಾಜ್ಯಗಳಿಗೆ ನೀಡಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು. ಕೇಂದ್ರ ಸರ್ಕಾರ ಜಿಎಸ್​​ಟಿ ವಿಚಾರದಲ್ಲಿ ರಾಜ್ಯಗಳಿಗೆ ಭಾರವಾಗದಂತೆ ಕ್ರಮ ವಹಿಸಿದೆ ಎಂದು ತಿಳಿಸಿದರು.

ಇದೇ ವೇಳೆ ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ವಿಚಾರವಾಗಿ ಮಾತನಾಡಿದ ಅವರು, ಈ ಕುರಿತಂತೆ ಸಭೆ ನಡೆಸಿ ಚಿತ್ರ ನಟ-ನಟಿಯರೇ ಆಗಿರಲಿ ಅಥವಾ ಯಾರೇ ಆಗಿರಲಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ರಾಜ್ಯ ಸರ್ಕಾರ ಡ್ರಗ್ಸ್ ವಾರ್ ಆರಂಭಿಸಿದ್ದು, ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತೆಸೆಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.