ಕಲಬುರಗಿ: ಶಿವಲಿಂಗ ಭಾವಿಕಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರಿಗೆ ಕಾರಿನ ಮೂಲಕ ಡಿಕ್ಕಿ ಹೊಡೆಸಿ ಸಿನಿಮಿಯ ರೀತಿಯಲ್ಲಿ ನವೆಂಬರ್ 4 ರಂದು ಹಡಗಿಲ್ ಬಳಿ ಶಿವಲಿಂಗ ಭಾವಿಕಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈಯಲಾಗಿತ್ತು. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇನ್ನು ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿ ಹೊಸಮನಿ, ರಾಜಕುಮಾರ ಮಯೂರ, ರೋಹಿತ್ ಹೊಸಮನಿ, ಲೋಹಿತ್ ಸೋಮರಾಯ ಹಾಗೂ ಗೋವಿಂದ ಕಾಂಬಳೆ ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ, ವಾಹನ ಮತ್ತಿತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.