ETV Bharat / state

ಕಲಬುರಗಿ: ಎಸಿಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ

author img

By ETV Bharat Karnataka Team

Published : Dec 7, 2023, 6:51 PM IST

ACC Cement Factory Deputy Manager suicide: ಚಿತ್ತಾಪುರ ತಾಲೂಕಿನ ಎಸಿಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

acc-cement-factory-deputy-manager-commits-suicide
ಕಲಬುರಗಿ: ಎಸಿಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಎಸಿಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಮೇಶ್​​ ಪವಾರ್​​ (47) ಆತ್ಮಹತ್ಯೆ ಮಾಡಿಕೊಂಡಿರುವ ಮ್ಯಾನೇಜರ್​.

ಆತ್ಮಹತ್ಯೆಗೆ ಮುನ್ನ ರಮೇಶ್ ವಿಡಿಯೋದಲ್ಲಿ ಮಾತನಾಡಿದ್ದಾರೆ. ತಮಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿರುವ ಅವರು, ಕೆಲವರ ಹೆಸರುಗಳನ್ನೂ ಕೂಡ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

ರಮೇಶ್ ಅವರು ಚಿತ್ತಾಪುರ ಮಾಜಿ ಶಾಸಕ ದಿ ವಾಲ್ಮಿಕಿ ನಾಯಕ್ ಅಳಿಯನಾಗಿದ್ದ ರಮೇಶ್​​ ಪವಾರ್​, ವಾಡಿ ಪಟ್ಟಣದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು. ಮೃತರ ಕುಟುಂಬಸ್ಥರ ಅಕ್ರಂದನ‌ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಪ್ರೀತಿ ನಿರಾಕರಣೆ: ಬೆಂಗಳೂರಲ್ಲಿ ಯುವತಿ ಮನೆ ಮುಂದೆಯೇ ಯುವಕ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.