ಕಲಬುರಗಿಯಲ್ಲಿ ಕೈ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಪೊಲೀಸ್ ಕಮಿಷನರ್​​ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ

author img

By

Published : Sep 2, 2021, 7:30 PM IST

Siddaramaiah

ಕಲಬುರಗಿ ಕಾಂಗ್ರೆಸ್​ ಕಾರ್ಯಕರ್ತನ ಮೇಲೆ ಪೊಲೀಸ್​ ಕಮಷನರ್​ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡಿ ಕಮಿಷನರ್​ ಅಮಾನತಿಗೆ ಆಗ್ರಹಿಸಿದ್ದಾರೆ.

ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕಲಬುರಗಿ ನಗರ ಪೊಲೀಸ್ ಕಮಿಷನರ್ ಅಮಾನವೀಯವಾಗಿ ಥಳಿಸಿದ ಆರೋಪದ ಹಿನ್ನೆಲೆ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​​ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಕಲಬುರಗಿ ನಗರ ಪೊಲೀಸ್ ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ. ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು. ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ ಎಂದು ಬರೆದಿದ್ದಾರೆ.

  • ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ @KlbCityPolice ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ

    ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು.

    ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ. pic.twitter.com/oyFD7FXDkk

    — Karnataka Congress (@INCKarnataka) September 2, 2021 " class="align-text-top noRightClick twitterSection" data=" ">

ಏನಿದು ಆರೋಪ:

ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನ್ನಿಸಾ ಫಾತಿಮಾ ಅವರ ಆಪ್ತ ಸಹಾಯಕ ಆದಿಲ್ ಶಾಹಿಲ್‌ಗೆ ಹಪ್ತ ಗುಂಬಜ್ ಬಳಿ ಕಮಿಷನರ್ ರವಿ ಕುಮಾರ್​​ ಬಾಸುಂಡೆ ಬರುವ ಹಾಗೆ ಹೊಡೆದಿದ್ದಾರೆ. ಶಾಸಕರ ಗನ್ ಮ್ಯಾನ್, ಇತರರು ಎಷ್ಟೆ ಹೇಳಿದರೂ ಕೇಳದೆ ಅವರ ಮೇಲೆಯೂ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.

ಓದಿ: ರಾಜ್​ಕುಮಾರ್, ವಿಷ್ಣುವರ್ಧನ್ ಪುತ್ಥಳಿ ಸೇರಿದಂತೆ ಅಕ್ರಮ ಪ್ರತಿಮೆಗಳ ತೆರವು: ಬಿಬಿಎಂಪಿಯಿಂದ ಪಟ್ಟಿ ರಿಲೀಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.