ETV Bharat / state

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ.. ಮೂವರು ಯುವಕರು ದುರ್ಮರಣ

author img

By

Published : Jul 9, 2022, 6:24 AM IST

ಜೇವರ್ಗಿ-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಮೂವರು ಯುವಕರು ಸ್ಥಳದಲ್ಲೇ ಸಾವು

ಕಲಬುರಗಿ ರಸ್ತೆ ಅಪಘಾತ
ಕಲಬುರಗಿ ರಸ್ತೆ ಅಪಘಾತ

ಕಲಬುರಗಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಜೇವರ್ಗಿ-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿರುವ ಕಟ್ಟಿಸಂಗಾವಿ ಬ್ರಿಡ್ಜ್ ಬಳಿ ಸಂಭವಿಸಿದೆ. ಆಕಾಶ್ ಬಡಿಗೇರ್ (21), ಶಿವು ಮ್ಯಾಗೇರಿ (21) ಮತ್ತು ಲಕ್ಷ್ಮಣ ಮಲಬಾಡಿ (18) ಮೃತರು.

ಮೃತ ಯುವಕರು ಜೇವರ್ಗಿ ತಾಲೂಕಿನ ಹಿಪ್ಪರಗಾ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಲಬುರಗಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ರು. ಶುಕ್ರವಾರ ಸಂಜೆ ಚಿತ್ತಾಪುರ ತಾಲೂಕಿನ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ಬೈಕ್ ಮೇಲೆ ಜೇವರ್ಗಿ ಕಡೆಗೆ ಹೊರಟಿದ್ದ ವೇಳೆ ಮಾರ್ಗ ಮಧ್ಯ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: ವಿದ್ಯುತ್​ ಸ್ಥಾವರದ ಬೂದಿ ವಿಚಾರವಾಗಿ ಪೊಲೀಸರು - ಗ್ರಾಮಸ್ಥರ ನಡುವೆ ಮಾರಾಮಾರಿ.. ರೈತ ಸಾವು, ಪೊಲೀಸರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.