ETV Bharat / state

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕಗ್ಗೊಲೆ

author img

By

Published : Oct 10, 2020, 2:17 PM IST

dsd
ಯುವಕನ ಕಗ್ಗೊಲೆ

ಕಲಬುರಗಿಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆಗೈದ ಘಟನೆ ನಗರದ ಎಂ.ಜಿ. ರಸ್ತೆಯ ಕಟ್ಟಡವೊಂದರ ಹಿಂಭಾಗದಲ್ಲಿ ನಡೆದಿದೆ.

ಯುವಕನ ಕಗ್ಗೊಲೆ

ಸುಲ್ತಾನಪುರ್ ರಿಂಗ್ ರೋಡ್​ ಬಳಿ ನಿವಾಸಿ ಗುಲಾಮ್ ದಸ್ತಾಗಿರ್(24) ಕೊಲೆಯಾದ ಯುವಕ. ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಶವ ಪತ್ತೆಯಾಗಿದ್ದು, ಬೇರೆ ಕಡೆ ಹತ್ಯೆಗೈದು ಇಲ್ಲಿ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಆಗಮಿಸಿದ್ದ ವಾಚ್​ಮ್ಯಾನ್​ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.