ETV Bharat / state

ಉಕ್ಕಿ ಹರಿದ ಭೀಮಾ ನದಿ.. ಕಲಬುರಗಿಯ ಹಲವಡೆ ರಸ್ತೆ ಸಂಪರ್ಕ ಕಡಿತ, ಯಲ್ಲಮ್ಮ ದೇವಸ್ಥಾನ ಜಲಾವೃತ!

author img

By

Published : Oct 21, 2022, 12:54 PM IST

ಮಹಾರಾಷ್ಟ್ರದಲ್ಲಿ ವರುಣಾರ್ಭಟ. ಉಕ್ಕಿ ಹರಿದ ಭೀಮಾ ನದಿ. ಕಲಬುರಗಿಯ ಹಲವೆಡೆ ರಸ್ತೆ ಸಂಪರ್ಕ ಕಡಿತ. ಮಣ್ಣೂರು ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ.

Road Block due to heavy rains in Kalaburagi
ಮಣ್ಣೂರು ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಪರಿಣಾಮ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ಬಹುತೇಕ ಭರ್ತಿಯಾಗಿದೆ.

ಉಕ್ಕಿ ಹರಿದ ಭೀಮಾ ನದಿ..ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

ಮಹಾರಾಷ್ಟ್ರದ ವೀರ್ ಜಲಾಶಯದಿಂದ 1.84 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಪರಿಣಾಮ ಅಫಜಲಪೂರ ತಾಲೂಕಿನ‌ ಸೊನ್ನ ಬಳಿ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಭೀಮಾ ಏತ ನೀರಾವರಿ ಯೋಜನೆ (ಸೊನ್ನ ಬ್ಯಾರೇಜ್) ಬಹುತೇಕ ಭರ್ತಿಯಾಗಿದೆ. 3.166 ಟಿಎಂಸಿ ಸಾಮರ್ಥ್ಯದ ಬ್ಯಾರೇಜ್​ನಲ್ಲಿ ಸದ್ಯ 2.902 ಟಿಎಂಸಿ ಅಂದರೆ ಶೇ .92 ರಷ್ಟು ನೀರು ಶೇಖರಣೆಯಾಗಿದೆ.

heavy rains in Kalaburagi
ಮಣ್ಣೂರು ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

ಬ್ಯಾರೇಜ್​​ಗೆ ಹೆಚ್ಚುವರಿ ನೀರು ಹರಿದು ಬರುತ್ತಿರುವ ಹಿನ್ನೆಲೆ ಸೊನ್ನ ಬ್ಯಾರೇಜ್​ನಿಂದ 1.86 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ಹರಿ ಬೀಡಲಾಗುತ್ತಿದೆ. ಭೀಮಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಅಫಜಲಪುರ ತಾಲೂಕಿನ ಮಣ್ಣೂರು ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆಯಾಗಿದೆ. ಘತ್ತರಗಿ, ಗಾಣಗಾಪುರ ಮೇಲ್ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ವರುಣನ ಅಬ್ಬರ: ಹಲವಡೆ ಸಂಪರ್ಕ ಕಡಿತ, ಶಾಲಾ ಮಕ್ಕಳು, ರೈತರು ತತ್ತರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.