ಕಲಬುರಗಿ: ಆನೆ ಕಾಲು ರೋಗದ ಮಾತ್ರೆಗಳನ್ನು ನುಂಗಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಅಫಜಲಪುರದ ಮಾಹಾಂತೇಶ್ವರ ಶಾಲೆಯಲ್ಲಿ ನಡೆದಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ನೀಡಿದ್ದ ಮಾತ್ರೆಗಳನ್ನು ಮಕ್ಕಳಿಗೆ ನೀಡಲಾಗಿತ್ತು. ಮಾತ್ರೆ ನುಂಗಿದ ಬಳಿಕ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ತಕ್ಷಣ ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲಾಗಿದೆ. ಘಟನೆ ಕುರಿತು ಆರೋಗ್ಯ ಇಲಾಖೆ ತನಿಖೆ ಕೈಗೊಂಡಿದೆ.