ಕಲಬುರಗಿ: ಬೈಕ್​ನಲ್ಲಿ ಹೊರಟ ಯುವಕನ ಬೆನ್ನಟ್ಟಿ ಕೊಚ್ಚಿ ಕೊಲೆಗೈದ ಹಂತಕರು

author img

By

Published : Sep 18, 2022, 11:24 AM IST

young-man-murder-in-kalaburagi

ಬೈಕ್​ನಲ್ಲಿ ತೆರಳುತ್ತಿದ್ದ ಯುವಕನ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಭೀಕರ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ: ಬೈಕ್​ನಲ್ಲಿ ತೆರಳುತ್ತಿದ್ದ ಯುವಕನ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಭಯಾನಕ‌ ಘಟನೆ ಹಳೆ ಜೇವರ್ಗಿ ರಸ್ತೆಯಲ್ಲಿರುವ ಪಿಎನ್‌ಟಿ ಕ್ರಾಸ್ ಸಮಿಪದ ಜೀವನಪ್ರಕಾಶ ಶಾಲೆ ಹತ್ತಿರ ನಡೆದಿದೆ. ನಗರದ ಹೌಸಿಂಗ್ ಬೋರ್ಡ್ ಕಾಲೋನಿ‌ ನಿವಾಸಿ ಜಮೀರ್​​ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ಜಮೀರ್​ ತನ್ನ ಬೈಕ್​ನಲ್ಲಿ ಹೊರಟಿರುವಾಗ ಬೆನ್ನಟ್ಟಿದ ಐದಾರು ಮಂದಿ ದುಷ್ಕರ್ಮಿಗಳು ಜೀವನ‌ಪ್ರಕಾಶ ಶಾಲೆ‌ ಬಳಿ​​​ ಅಡ್ಡಗಟ್ಟಿ ನೋಡನೋಡುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ‌ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ನರಳಾಡಿದ ಯುವಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ.

ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದುವೆಯಾಗಿ 15 ದಿನ: ಪತಿಗೆ ಕರೆಂಟ್​ ಶಾಕ್​ ಕೊಟ್ಟು ಕೊಂದ ಪತ್ನಿ.. ಕಾಲ್​ ರೆಕಾರ್ಡಿಂಗ್​ನಿಂದ ಸತ್ಯ ಬಹಿರಂಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.