ETV Bharat / state

ಕಲಬುರಗಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯುವಕ‌ನ ಬರ್ಬರ ಕೊಲೆ

author img

By

Published : Oct 6, 2022, 12:07 PM IST

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.

youth murdered in kalaburagi
ಯುವಕ‌ನ ಬರ್ಬರ ಕೊಲೆ

ಕಲಬುರಗಿ: ಶರಣರ ನಾಡು ಕಲಬುರಗಿ ಈಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ನಡೆದ ಯುವಕ‌ನ ಕೊಲೆ ಸುದ್ದಿ ಮಾಸುವ ಮುನ್ನವೇ ಇದೀಗ ಮತ್ತೊಂದು‌ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ತಡರಾತ್ರಿ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.

ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು ಕೊಲೆಗೈದಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.