ಕೋವಿಡ್​​-19: ಗಡಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ

author img

By

Published : Sep 4, 2021, 11:49 PM IST

CM bommai

ಗಡಿ ರಾಜ್ಯಗಳಲ್ಲಿ ಕೋವಿಡ್​ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿರುವ ಕಾರಣ, ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಮಡಿಕೇರಿ(ಕೊಡಗು): ಕೋವಿಡ್​​-19 ನಿಯಂತ್ರಣ ಸಂಬಂಧ ಗಡಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದು ಮಾತನಾಡಿದ ಅವರು, ವಾರಾಂತ್ಯದ ಕರ್ಫ್ಯೂ ಸಡಿಲಿಕೆ ಮಾಡುವಲ್ಲಿ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆ ಮಾಡುವಂತಾಗಬೇಕು ಎಂದರು. ಇದರ ಜೊತೆಗೆ ವ್ಯಾಕ್ಸಿನೇಷನ್​ ಶೇಕಡಾವಾರು ಗುರಿ ಸಾಧಿಸಲು ಸೂಚನೆ ನೀಡಿದರು.

  • ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೋವಿಡ್19 ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಲಾಯಿತು.
    ಸಚಿವರಾದ @JnanendraAraga, @KotasBJP, @RAshokaBJP, @karkalasunil, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು pic.twitter.com/0g1ERocP1H

    — Basavaraj S Bommai (@BSBommai) September 4, 2021 " class="align-text-top noRightClick twitterSection" data=" ">

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಅಲ್ಲಿನ ಆಡಳಿತ ವರ್ಗದೊಂದಿಗೆ ಕೋವಿಡ್​ ವಿಚಾರವಾಗಿ ವಿಡಿಯೋ ಕಾನ್ಫರೆನ್ಸ್​ ನಡೆಸಿದರು.

CM bommai
ಸಿಎಂ ಜೊತೆಗಿನ ಸಂವಾದಲ್ಲಿ ಭಾಗಿಯಾದ ಮಡಿಕೇರಿ ಜಿಲ್ಲಾಡಳಿತ

ಸಭೆಯಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, 29 ಗ್ರಾಮಗಳಲ್ಲಿ ಶೇ. 5ಕ್ಕಿಂತಲೂ ಹೆಚ್ಚಿನ ಪ್ರಕರಣಗಳಿದ್ದು, 4 ಗ್ರಾಮಗಳಲ್ಲಿ ಶೇ.10 ಕ್ಕಿಂತಲೂ ಹೆಚ್ಚು ಹಾಗೂ 2 ಗ್ರಾಮಗಳಲ್ಲಿ 20 ಕ್ಕಿಂತಲೂ ಹೆಚ್ಚಿನ ಪ್ರಕರಣಗಳು ಕಂಡುಬಂದಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ನೀಡಲಾಗುತ್ತಿದ್ದು, ಶೇ.81.3 ರಷ್ಟು ಲಸಿಕಾ ಗುರಿ ಪೂರ್ಣಗೊಳಿಸಲಾಗಿದೆ. 22 ಗಡಿ ಭಾಗಗಳನ್ನು ಗುರುತಿಸಿ 23 ಸಾವಿರ ಲಸಿಕಾ ಗುರಿಯನ್ನು ಹೊಂದಿದ್ದು, ಶೇ.82 ರಷ್ಟು ಪೂರ್ಣಗೊಳಿಸಲಾಗಿದೆ ಎಂದರು.

ಗಡಿ ಭಾಗದಿಂದ 20 ಕಿ.ಮೀಟರ್​ ಇರುವ ಗ್ರಾಮಗಳಿಗೆ ಶೇ.100 ಲಸಿಕೆ ನೀಡಿ ಗುರಿ ಸಾಧಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಲಾಗಿದೆ. 12 ಗ್ರಾಮಗಳಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಆ ಗ್ರಾಮಗಳನ್ನು ಹಾಟ್‍ಸ್ಪಾಟ್ ಎಂದು ಪರಿಗಣಿಸಿ, ಪೂರ್ಣ ಪ್ರಮಾಣದ ಲಸಿಕೆಯನ್ನು ನೀಡಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿರಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್​​ ಡಿಕ್ಕಿ: ನಾಲ್ಕು ತಿಂಗಳ ಮಗು ಸೇರಿ ಮೂವರು ದುರ್ಮರಣ

ಸಂವಾದದಲ್ಲಿ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್, ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಡಾ.ಕಾರ್ಯಪ್ಪ, ಮಡಿಕೇರಿ ತಹಶಿಲ್ದಾರ್ ಮಹೇಶ್, ಡಾ.ಆನಂದ್, ಡಾ.ಗೋಪಿನಾಥ್ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.