ETV Bharat / state

ಮನೆಗೆ ಬೆಂಕಿಯಿಟ್ಟ ಪ್ರಕರಣ: ಸಾವು-ಬದುಕಿನ ಹೋರಾಟ ಮುಗಿಸಿದ ಆರೋಪಿ ಪತ್ನಿ

author img

By

Published : Apr 6, 2021, 9:59 AM IST

ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎರವರ ಬೋಜ ಎಂಬಾತ ಮದ್ಯ ಸೇವಿಸಿ ಬಂದು, ಎರವರ ಮಂಜು ಎಂಬುವವರ ಮನೆ ಬಾಗಿಲನ್ನು ಹೊರಗಿನಿಂದ ಲಾಕ್​ ಮಾಡಿ ಬೆಂಕಿ ಹಚ್ಚಿದ್ದ. ಈ ಘಟನೆಯಲ್ಲಿ ಮೂವರು ಸಜೀವ ದಹನಗೊಂಡಿದ್ದು, ಮತ್ತೆ ಮೂವರು ಮೈಸೂರಿನ ಕೆ.ಆರ್​.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

kodagu
ಪೊನ್ನಂಪೇಟೆ ಮನೆಗೆ ಬೆಂಕಿಯಿಟ್ಟ ಪ್ರಕರಣ: ಆರೋಪಿ ಪತ್ನಿ ಸಾವು

ಕೊಡಗು: ಮದ್ಯದ ಮತ್ತಲ್ಲಿ ಮನೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಆರೋಪಿಯ ಪತ್ನಿ ಸಾವನ್ನಪ್ಪಿದ್ದಾರೆ.

ಭಾಗ್ಯ (40) ಮೃತ ದುರ್ದೈವಿ. ಈ ಮೂಲಕ ಪೊನ್ನಂಪೇಟೆ ಸಮೀಪ ಮುಗುಟಗೇರಿ ಗ್ರಾಮದಲ್ಲಿ ನಡೆದ ದುರಂತದಲ್ಲಿ ಈವರೆಗೆ ಒಟ್ಟು 8 ಮಂದಿ ಸಾವನ್ನಪ್ಪಿದಂತಾಗಿದೆ.

ಸುಟ್ಟ ಗಾಯಗಳಿಂದ ನರಳುತ್ತಿದ್ದ ಭಾಗ್ಯ ಅವರನ್ನು ಮೈಸೂರು ಕೆ.‌ಆರ್.‌ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಹೆಚ್ಚು ಸುಟ್ಟ ಗಾಯಗಳಾಗಿರುವುದರಿಂದ ‌ಮುಂಜಾನೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗುಂಡಿನ ಮತ್ತಲ್ಲಿ ದುಷ್ಕೃತ್ಯ: ಕೊಡಗಿನಲ್ಲಿ ಮೂವರ ಸಜೀವ ದಹನ, ಮೂವರು ಆಸ್ಪತ್ರೆಯಲ್ಲಿ ಸಾವು

ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎರವರ ಬೋಜ ಎಂಬಾತ ಮದ್ಯ ಸೇವಿಸಿ ಬಂದು, ಎರವರ ಮಂಜು ಎಂಬುವವರ ಮನೆ ಬಾಗಿಲನ್ನು ಹೊರಗಿನಿಂದ ಲಾಕ್​ ಮಾಡಿ ಬೆಂಕಿ ಹಚ್ಚಿದ್ದ. ಈ ವೇಳೆ ಮನೆಯಲ್ಲಿದ್ದ ಎಂಟು ಜನರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಉಳಿದ ಐವರನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.