ETV Bharat / state

ಚೆನ್ನಯ್ಯಕೋಟೆ ಗ್ರಾಮದಲ್ಲಿ ವಿದ್ಯುತ್​ ಸ್ಪರ್ಶಿಸಿ ಕಾಡಾನೆ ಸಾವು

author img

By

Published : Apr 30, 2020, 9:57 PM IST

ಚೆನ್ನಯ್ಯಕೋಟೆ ಗ್ರಾಮದ ಕಾಫಿ ತೋಟದಲ್ಲಿ ವಿದ್ಯುತ್‌ ತಂತಿ ತಗುಲಿ ಅಂದಾಜು 8ರಿಂದ 10 ವರ್ಷದ ಗಂಡಾನೆ ಸಾವನ್ನಪ್ಪಿದೆ.

wild elephant death
ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ವಿರಾಜಪೇಟೆ/ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್‌ ತಂತಿ ತಗುಲಿ ಕಾಡಾನೆ ಮೃತಪಟ್ಟಿರುವ ಘಟನೆ ಸಮೀಪದ ಚೆನ್ನಯ್ಯಕೋಟೆ ಗ್ರಾಮದಲ್ಲಿ ನಡೆದಿದೆ.

ಕಾಫಿ ಬೆಳೆಗಾರ ಅರುಣ್‌ ಎಂಬುವರ ತೋಟದಲ್ಲಿ ಅಂದಾಜು 8ರಿಂದ 10 ವರ್ಷದ ಗಂಡಾನೆ ಸಾವನ್ನಪ್ಪಿದೆ. ಬೇಸಿಗೆಯಾದ್ದರಿಂದ ಅರಣ್ಯ ಪ್ರದೇಶದಲ್ಲಿ ಆಹಾರದ ಕೊರತೆ ಉಂಟಾಗಿದ್ದು, ಕಾಡಾನೆಗಳು ಕಾಫಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಹೀಗೆ ತೋಟಕ್ಕೆ ಬಂದಿದ್ದ ಕಾಡಾನೆಗಳ ಪೈಕಿ ಗಂಡಾನೆಗೆ ತೋಟದ ತಳ ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.