ETV Bharat / state

ಕೊಡಗಿನಲ್ಲಿ ಗಾಳಿ ಸಹಿತ ಮಳೆ: ಆತಂಕದಲ್ಲಿ ಜನತೆ

author img

By

Published : May 15, 2021, 8:50 AM IST

tauktae cyclone effect in Karnataka
ಕೊಡಗಿನಲ್ಲಿ ಬಾರಿ ಗಾಳಿ ಮಳೆ ಜೀವ ಭಯದಲ್ಲಿ ಜನರು

ಹವಾಮಾನ ಇಲಾಖೆ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡುತ್ತು. ನಗರಸಭೆ ನೋಟಿಸ್ ಜಾರಿ ಮಾಡಿದ್ದರೂ ಕೆಲವು ಜನರು ಅಲ್ಲೇ ವಾಸಿಸುತ್ತಿದ್ದಾರೆ. ಈ ಬೆನ್ನಲ್ಲೇ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಜನರಲ್ಲಿ ಆತಂಕ ಮೂಡಿದೆ.

ಕೊಡಗು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಆರಂಭವಾಗಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.

ಕೊಡಗಿನಲ್ಲಿ ಗಾಳಿ ಸಹಿತ ಮಳೆ

ಹವಾಮಾನ ಇಲಾಖೆ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡುತ್ತು. ಕೆಲವು ಜನರು ಕೂಡ ಅಪಾಯದ ಸ್ಥಳಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕಳೆದ ಬಾರಿ ಅನಾಹುತ ಸಂಭವಿಸಿದ ತಲಕಾವೇರಿ ಮತ್ತು ಬೆಟ್ಟಗುಡ್ಡಗಳಲ್ಲಿ, ನದಿಪಾತ್ರದಲ್ಲಿ ವಾಸ ಮಾಡುವ ಜನರಲ್ಲಿ ವರುಣಾರ್ಭಟದಿಂದ ಭೀತಿ ಹೆಚ್ಚಾಗಿದೆ.

ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅವಾಂತರ ಹೆಚ್ಚಾಗಿದೆ. 2018, 2019, 2020ರಲ್ಲಿ ಮಳೆಯಿಂದ ಉಂಟಾದ ಪ್ರವಾಹದಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಮಡಿಕೇರಿ ನಗರದ ಇಂದಿರಾನಗರ, ಚಾಮುಂಡೇಶ್ವರಿ ನಗರ ಹಾಗೂ ಮಂಗಳಾದೇವಿ ನಗರ ನಿವಾಸಿಗಳಿಗೆ ನಗರಸಭೆ ನೋಟಿಸ್ ಜಾರಿ ಮಾಡಿದ್ದರೂ ಕೆಲವು ಜನರು ಅಲ್ಲೇ ವಾಸಿಸುತ್ತಿದ್ದಾರೆ. ಈಗಾಗಲೇ 2018ರಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿರುವ ಜನ ಸಣ್ಣ ಮಳೆ ಬಂದರು ಆತಂಕಗೊಳ್ಳುವಂತಾಗಿದೆ.

ಇದನ್ನೂ ಓದಿ: ಗಾಳಿ ಮಳೆಗೆ ಪಾಲಿಹೌಸ್, ಟೊಮೇಟೊ ಬೆಳೆ ನೆಲಸಮ

ಜಿಲ್ಲೆಯ ವಿರಾಜಪೇಟೆ ನಗರದ ಅಯ್ಯಪ್ಪಬೇಟ್ಟ, ನೆಹರು ನಗರ, ಅರಸುನಗರ ಹಾಗೂ ಮಲೇತಿರಿಕೆ ಬೆಟ್ಟದ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿಯಿಂದಲೂ ನೋಟಿಸ್ ನೀಡಲಾಗಿತ್ತು. ಕಳೆದ ಮೂರು ವರ್ಷದ ಮಳೆಗಾಲದಲ್ಲಿ ಅರ್ಧ ಬಿದ್ದು ಅಪಾಯದಂಚಿನಲ್ಲಿರುವ ಮನೆಗಳಲ್ಲೇ ಜನರು ಬದುಕು ಕಟ್ಟಿಕೊಂಡಿದ್ದಾರೆ. ಈಗ ಮಳೆ ಹೆಚ್ಚಾದ್ರೆ ಮುಂದೇನು ಮಾಡಬೇಕೆಂದು ಜನರು ಚಿಂತೆಗೆ ಸಿಲುಕಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.