ETV Bharat / state

ಕೊಡಗು ನಿಷೇಧಾಜ್ಞೆ ಹಿನ್ನೆಲೆ ಎಸ್ಪಿ ಕಚೇರಿಯಲ್ಲಿ ಐಜಿಪಿ ಸಭೆ

author img

By

Published : Aug 23, 2022, 5:46 PM IST

KN_mdk_IGP meeting
ಪ್ರವೀಣ್ ಮಧುಕರ್ ಪವಾರ್, ಐಜಿಪಿ

ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ದಕ್ಷಿಣ ವಲಯದ ಐಜಿಪಿ ಇಂದು ಜಿಲ್ಲೆಗೆ ಭೇಟಿ ನೀಡಿ ನಿಷೇಧಾಜ್ಞೆ ಸಂದರ್ಭ ಯಾವುದೇ ಆಹಿತಕರ ಘಟನೆ ಸಂಭವಿಸದಂತೆ, ಬಿಗಿ ಬಂದೋಬಸ್ಥ್​ ಕೈಗೊಳ್ಳುವಂತೆ ಪೊಲೀಸ್​ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಕೊಡಗು: ಜಿಲ್ಲೆಯಲ್ಲಿ ಆ.24ರಿಂದ ಆ.27ರ ವರೆಗೆ ನಿಷೇಧಾಜ್ಞೆ ಜಾರಿ ಹಿನ್ನೆಲೆ ಮುಂಜಾಗ್ರತ ಕ್ರಮ ಕೈಗೊಳ್ಳಲು ದಕ್ಷಿಣ ವಲಯ ಐಜಿ ಪ್ರವೀಣ್ ಮಧುಕರ್ ಪವಾರ್ ಅವರು ಇಂದು ಎಸ್​​ಪಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ಕುರಿತು ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ ಹಿನ್ನೆಲೆ ಜಿಲ್ಲೆಯ ಎಲ್ಲಾ ಚೆಕ್​ಪೋಸ್ಟ್​ಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಯಿಂದ ಬರುವವರನ್ನೂ ತಪಾಸಣೆ ನಡೆಸಲಾಗುತ್ತಿದೆ. ಹೆಚ್ಚಿನ ಭದ್ರತೆಗಾಗಿ ಜಿಲ್ಲೆಗೆ ಹೊರ ಜಿಲ್ಲೆಯ ಪೊಲೀಸ್​ ತಂಡಗಳನ್ನು ಕರೆಸಿಕೊಳ್ಳಲಾಗುತ್ತಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆ ಆಗದಂತೆ ತಪಾಸಣೆ ನಡೆಸಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆ.26ರಂದು ಜಿಲ್ಲೆಯಲ್ಲಿ ಕಾಂಗ್ರೆಸ್​​ನಿಂದ ಮಡಿಕೇರಿ‌ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ನಡೆಯಲಿರುವ ಹಿನ್ನೆಲೆ ನಿನ್ನೆ ಜಿಲ್ಲಾಧಿಕಾರಿಗಳು ಮುಂಜಾಗ್ರತ ಕ್ರಮವಾಗಿ 4 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆ ಇಂದು ಐಜಿಪಿ ಸಭೆ ನಡೆಸಿದರು.

ಪ್ರವೀಣ್ ಮಧುಕರ್ ಪವಾರ್, ಐಜಿಪಿ

ಆದ್ರೆ ಈ ಕುರಿತು ಇಂದು ಮಾತನಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಆ. 26 ರಂದು ಕಾಂಗ್ರೆಸ್​ನಿಂದ ಹಮ್ಮಿಕೊಂಡಿದ್ದ ಕೊಡಗು ಚಲೋ ಪ್ರತಿಭಟನೆಯನ್ನು ಕೈಬಿಟ್ಟಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಬಗ್ಗೆ ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್‌ 24 ರಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.