ಕೊಡಗು: ಜಿಲ್ಲೆಯಲ್ಲಿ ಜೂನ್ 13ರವರೆಗೆ ಭಾರೀ ಗಾಳಿ-ಮಳೆ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಮಳೆ ವರದಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಇರುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದ್ದು, ತುರ್ತು ಪರಿಸ್ಥಿತಿಯಲ್ಲಿ ಕಂಟ್ರೋಲ್ ರೂಂಗೆ ಕರೆಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮನವಿ ಮಾಡಿದ್ದಾರೆ.
ಜೂನ್ 14 ರಿಂದ 20 ರವರೆಗೆ ಮಳೆ ಪ್ರಮಾಣ ಕಡಿಮೆಯಾಗಿ ಜೂನ್ 20ರ ನಂತರ ಜಿಲ್ಲೆಯಲ್ಲಿ ಪುನಃ ಮುಂಗಾರು ಚುರುಕುಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.