ETV Bharat / state

ಹಿಜಾಬ್​ ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್​ ಕಳುಹಿಸಿದ ಹಿನ್ನೆಲೆ : ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ

author img

By

Published : Feb 19, 2022, 7:08 PM IST

Updated : Feb 19, 2022, 8:11 PM IST

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ ಕೋರ್ಟ್​ ಆದೇಶವನ್ನು ಮೀರಿ ಹಿಜಾಬ್​ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರನ್ನು ವಾಪಸ್​ ಕಳುಹಿಸಿದ್ದ ಪ್ರಾಂಶುಪಾಲರಿಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಿದ್ದಾರೆ..

Unknown person are threatening to Madikeri college principal
ಮಡಿಕೇರಿ ಕಾಲೇಜಿನ ಪ್ರಾಂಶುಪಾಲರಿಗೆ ಕಿಡಿಗೇಡಿಗಳಿಂದ ಕೊಲೆ ಬೆದರಿಕೆ

ಕೊಡಗು : ಹಿಜಾಬ್​ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಿದ್ದ ಪ್ರಾಂಶುಪಾಲರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಪ್ರಾಂಶುಪಾಲರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಡಿಕೇರಿ ಕಾಲೇಜಿನ ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ ಕೋರ್ಟ್​ ಆದೇಶವನ್ನು ಮೀರಿ ಹಿಜಾಬ್​ ಧರಿಸಿ ಕಾಲೇಜಿಗೆ ಬಂದಿದ್ದರು. ಆಗ ಪ್ರಾಂಶುಪಾಲರಾದ ವಿಜಯ್ ಅವರು, ವಿದ್ಯಾರ್ಥಿನಿಯರಿಗೆ ಬುದ್ಧಿವಾದ ಹೇಳಿದ್ದರು. ಆದರೂ ವಿದ್ಯಾರ್ಥಿಗಳು ಹಠಕ್ಕೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ವಾಪಸ್ ಕಳುಹಿಸಿದ್ದರು.

ಇದನ್ನು ನೋಡಿದ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್​ ಮೂಲಕ ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜಮೀನಿನ ಖಾತೆಗೆ ಲಕ್ಷ ಲಕ್ಷ ಲಂಚ ಕೇಳ್ತಾರೆ.. ಹೆಚ್​ಡಿಕೆ ಎದುರೇ ಅಧಿಕಾರಿಗಳ ವಿರುದ್ಧ ರೈತನ ಗುಡುಗು..

Last Updated :Feb 19, 2022, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.