ETV Bharat / state

ಸಿದ್ದರಾಮಯ್ಯ ಸೇರಿ ಪಕ್ಷದ​ ನಾಯಕರ ಸ್ಪರ್ಧೆ ಬಗ್ಗೆ ಹೈಕಮಾಂಡ್​ ನಿರ್ಧಾರ: ರಮೇಶ್​​ ಕುಮಾರ್​​​

author img

By

Published : Nov 6, 2022, 5:28 PM IST

Updated : Nov 6, 2022, 10:17 PM IST

high-command-will-decide-about-ticket-of-congress-leaders
ನಾನು ಎಐಸಿಸಿ ಅಧ್ಯಕ್ಷ್ಯನಲ್ಲ, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ನಾಯಕರ ಸ್ಪರ್ಧೆ ಬಗ್ಗೆ ಹೈಕಮಾಂಡ್​ ನಿರ್ಧಾರ : ರಮೇಶ್​​ ಕುಮಾರ್​​​

ಕಾಂಗ್ರೆಸ್​​ನ ರೀತಿ, ರಿವಾಜುಗಳಂತೆ ಎಲ್ಲ ನಿರ್ಧಾರವಾಗುತ್ತದೆ. ಎಲ್ಲರೂ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​​ ನಾಯಕರ ಸ್ಪರ್ಧೆಯನ್ನು ಕಾಂಗ್ರೆಸ್​​ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಕೋಲಾರ: ಚುನಾವಣೆಯಲ್ಲಿನ ಸ್ಪರ್ಧೆಯ ವಿಚಾರ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷನಲ್ಲ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ ನಾಯಕರ ಸ್ಪರ್ಧೆಯನ್ನು ಹೈಕಮಾಂಡ್​ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸ್ಪರ್ಧೆ ವಿಚಾರ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷನಲ್ಲ, ನನಗೂ ಶ್ರೀನಿವಾಸಪುರಕ್ಕೆ ಬಂದು ಸ್ಪರ್ಧೆ ಮಾಡಿ ಎಂದು ಜನರು ಮನವಿ ಮಾಡುತ್ತಾರೆ. ಆದರೆ ಆ ರೀತಿ ನಡೆಯೋದಿಲ್ಲ. ಕಾಂಗ್ರೆಸ್​​ನ ರೀತಿ, ರಿವಾಜುಗಳಂತೆ ಎಲ್ಲ ನಿರ್ಧಾರವಾಗುತ್ತದೆ. ಪಕ್ಷಕ್ಕೆ ಎಲ್ಲರೂ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​​ ನಾಯಕರ ಸ್ಪರ್ಧೆಯನ್ನು ಕಾಂಗ್ರೆಸ್​​ ಹೈ ಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಸೇರಿ ಪಕ್ಷದ​ ನಾಯಕರ ಸ್ಪರ್ಧೆ ಬಗ್ಗೆ ಹೈಕಮಾಂಡ್​ ನಿರ್ಧಾರ: ರಮೇಶ್​​ ಕುಮಾರ್​​​

ಸಿದ್ದರಾಮಯ್ಯ ಕೋಲಾರ ಪ್ರವಾಸ: ಬರುವ ನ.13 ರಂದು ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಸಂಪ್ರದಾಯದಂತೆ ದೇಗುಲ, ದರ್ಗಾ, ಚರ್ಚ್‌ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಕೋಲಾರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುವಂತೆ ಅಭಿಮಾನಿಗಳು ಮನವಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, 25 ವರ್ಷ ದಾಟಿದವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಮಾನಸಿಕ ಆರೋಗ್ಯ ಸರಿಯಿರಬೇಕು. ಕ್ರಿಮಿನಲ್ ಪ್ರಕರಣ ಇಲ್ಲದವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ ಎಂದು ವ್ಯಂಗ್ಯವಾಡಿದರು.

ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಕೆ.ಎಚ್.ಮುನಿಯಪ್ಪ ಹಾಗು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮುಂದಿನ ದಿನಗಳಲ್ಲಿ ಸಮಯ ಸಂದರ್ಭ ಬಂದಾಗ ಇಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುವುದಾಗಿ ಹೇಳಿದರು.

ಇದನ್ನೂ ಓದಿ : ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮನ; ಕಾರ್ಯಕರ್ತರ ಜೈಕಾರ

Last Updated :Nov 6, 2022, 10:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.