ETV Bharat / state

ಡಿಸಿ ಆದೇಶ ಉಲ್ಲಂಘನೆ: ಕೋಲಾರ ಜಿಲ್ಲೆ ಪ್ರವೇಶಕ್ಕೆ ಯತ್ನಿಸಿದ ಮುತಾಲಿಕ್​ ಪೊಲೀಸ್​ ವಶಕ್ಕೆ

author img

By

Published : Nov 18, 2021, 12:13 PM IST

Updated : Nov 18, 2021, 12:58 PM IST

Pramod Muthalik arrest
ಮುತಾಲಿಕ್​ ಪೊಲೀಸ್​ ವಶಕ್ಕೆ

ಬಾಬಾಬುಡನ್​ ಗಿರಿಯ ದತ್ತಪೀಠಕ್ಕೆ ಹೊರಟಿದ್ದ ಬಸ್‌ ಮೇಲೆ ಕಿಡಿಗೇಡಿಗೆಳು ಕಲ್ಲು ತೂರಾಟ ನಡೆಸಿದ ಘಟನೆಯನ್ನ ಖಂಡಿಸಿ ಇಂದು ಕೋಲಾರ ಬಂದ್​ಗೆ ಕರೆ ನೀಡಲಾಗಿದೆ. ಡಿಸಿ ಆದೇಶ ಉಲ್ಲಂಘಿಸಿ ಜಿಲ್ಲೆ ಪ್ರವೇಶಕ್ಕೆ ಯತ್ನಿಸಿ ಬಂದ್​ನಲ್ಲಿ ಭಾಗವಹಿಸಲು ಮುಂದಾದ ಪ್ರಮೋದ್​ ಮುತಾಲಿಕ್​ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರ: ಜಿಲ್ಲಾಧಿಕಾರಿಗಳ ಆದೇಶ ಮೀರಿ ಬಂದ್​​ಗೆ ಬೆಂಬಲ ಸೂಚಿಸಲು ನಗರಕ್ಕೆ ಬರುತ್ತಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರ ಜಿಲ್ಲೆ ಪ್ರವೇಶಕ್ಕೆ ಯತ್ನಿಸಿದ ಮುತಾಲಿಕ್​ ಪೊಲೀಸ್​ ವಶಕ್ಕೆ

ದತ್ತಮಾಲಾಧಾರಿಗಳಿದ್ದ ಬಸ್​ ಮೇಲೆ ಕಿಡಿಗೇಡಿಗಳ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋಲಾರ ಬಂದ್​ ಮಾಡಲಾಗಿದೆ. ಬಂದ್​​ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದ್ದ ಹಿನ್ನೆಲೆ ಮುತಾಲಿಕ್ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ನಿಷೇಧ ಹೇರಿ ಆದೇಶ ಹೊರಡಿಸಿದ್ದರು.

ಇದನ್ನು ಓದಿ-ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್‌ ಮೇಲೆ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್​ಗೆ ಕರೆ

ಡಿಸಿ ಆದೇಶ ಮೀರಿ ಜಿಲ್ಲೆಯನ್ನು ಪ್ರವೇಶ ಮಾಡಲು ಯತ್ನಿಸಿದ ಪ್ರಮೋದ್​ ಮುತಾಲಿಕ್​ ಅವರನ್ನು ಗಡಿಭಾಗ ರಾಮಸಂದ್ರದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Last Updated :Nov 18, 2021, 12:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.