ETV Bharat / state

ಕೋಲಾರ: ಗ್ರಾಮ ಪಂಚಾಯತ್​ ಅಧ್ಯಕ್ಷರ ಚುನಾವಣೆಯಲ್ಲಿ ವಿಕೋಪಕ್ಕೆ ತಿರುಗಿದ ಗಲಾಟೆ

author img

By

Published : Jun 27, 2022, 3:08 PM IST

ಗ್ರಾಮ ಪಂಚಾಯಿತಿ ಅದ್ಯಕ್ಷ ಚುನಾವಣೆಯಲ್ಲಿ ವಿಕೋಪಕ್ಕೆ ತಿರುಗಿದ ಗಲಾಟೆ
ಗ್ರಾಮ ಪಂಚಾಯಿತಿ ಅದ್ಯಕ್ಷ ಚುನಾವಣೆಯಲ್ಲಿ ವಿಕೋಪಕ್ಕೆ ತಿರುಗಿದ ಗಲಾಟೆ

ಕಳೆದ ಮೇ ತಿಂಗಳಿನಲ್ಲಿ ಅಧ್ಯಕ್ಷರು ರಾಜೀನಾಮೆ ನೀಡಿದ ನಂತರ ನೂತನ ಅಧ್ಯಕ್ಷರ ಆಯ್ಕೆ ಕಾರ್ಯ ಇಂದು ನಡೆಯಿತು. ಎರಡೂ ಪಕ್ಷಗಳ ಬೆಂಬಲಿಗ ಸದಸ್ಯರು ಪಂಚಾಯತ್​ನಲ್ಲಿ ಸಮ ಬಲ ಹೊಂದಿದ್ದು, ತಲಾ 8 ಮತಗಳು ಬಂದಿದ್ದವು. ಇದೇ ವಿಷಯ ಗಲಾಟೆಗೆ ತಿರುಗಿದೆ.

ಕೋಲಾರ: ಶ್ರೀನಿವಾಸಪುರದಲ್ಲಿ ಗ್ರಾಮ ಪಂಚಾಯತ್​ ಅದ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಶ್ರೀನಿವಾಸಪುರದ ಬೈರಗಾನಹಳ್ಳಿ ಪಂಚಾಯತ್​ನಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಒಂದು ಕಾರ್ ಮತ್ತು ಬೈಕ್ ಜಖಂಗೊಂಡಿವೆ.

ಕಳೆದ ಮೇ ತಿಂಗಳಿನಲ್ಲಿ ಅಧ್ಯಕ್ಷರು ರಾಜೀನಾಮೆ ನೀಡಿದ ನಂತರ ನೂತನ ಅಧ್ಯಕ್ಷರ ಆಯ್ಕೆ ಕಾರ್ಯ ಇಂದು ನಡೆಯಿತು. ಎರಡೂ ಪಕ್ಷಗಳ ಬೆಂಬಲಿಗ ಸದಸ್ಯರು ಪಂಚಾಯತ್​ನಲ್ಲಿ ಸಮಬಲ ಹೊಂದಿದ್ದು, ತಲಾ 8 ಮತಗಳು ಬಂದಿದ್ದವು. ಹೀಗಾಗಿ ಲಾಟರಿ ಮೂಲಕ ನಡೆದ ಆಯ್ಕೆಯಲ್ಲಿ ಕಾಂಗ್ರೆಸ್​​​​​ನ ನಿರ್ಮಲಮ್ಮ ಮತ್ತು ಉಪಾಧ್ಯಕ್ಷೆಯಾಗಿ ಗೌರಮ್ಮ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯತ್​ ಅಧ್ಯಕ್ಷರ ಚುನಾವಣೆಯಲ್ಲಿ ವಿಕೋಪಕ್ಕೆ ತಿರುಗಿದ ಗಲಾಟೆ

ಈ ಸಂದರ್ಭದಲ್ಲಿ ಮಾತಿನ ಚಕಮಕಿ ಉಂಟಾಗಿ ಜಗಳ ವಿಕೋಪಕ್ಕೆ ತಿರುಗಿದೆ. ಎರಡೂ ಪಕ್ಷಗಳ ಬೆಂಬಲಿಗರು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ. ಶ್ರೀನಿವಾಸ್ ಎಂಬುವರಿಗೆ ಸೇರಿದ ಕಾರ್​​​ಗೆ ಕಲ್ಲು ತೂರಲಾಗಿದೆ. ಸದ್ಯ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೈಸೂರು: ವಿಷ ಕುಡಿದು ಪೊಲೀಸ್ ಠಾಣೆಗೆ ಬಂದ ಕೊಲೆ ಆರೋಪಿ!

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.