ಕೊಪ್ಪಳದ ಅಗಡಿ ನಿವಾಸಕ್ಕೆ ಶೆಟ್ಟರ್​ ಭೇಟಿ.. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಿಎಂ

author img

By

Published : Oct 13, 2021, 6:13 PM IST

former-cm-shetter-solace-to-virupakshappas-family-members

ವಿರೂಪಾಕ್ಷಪ್ಪ ಅವರು ಶಾಸಕರಾಗಿ ಮತ್ತು ಕೆಲವೇ ದಿನಗಳು ಮಾತ್ರ ಸಚಿವರಾಗಿದ್ದರು. ಜನರಿಗೆ ಒಳ್ಳೆಯ ಕೆಲಸ ಮಾಡಿದ್ದರು. ತಾವು ಸಿಎಂ ಆದಾಗ, ಸಚಿವರಾದಾಗ ಕೊಪ್ಪಳದ ಸಾರ್ವಜನಿಕರ ಹಿತಾಸಕ್ತಿ ದೃಷ್ಠಿಯಿಂದ ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಭೇಟಿ ಮಾಡುತ್ತಿದ್ದರು ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಸ್ಮರಿಸಿದರು.

ಕೊಪ್ಪಳ: ವಯೋಸಹಜ ಕಾಯಿಲೆಯಿಂದ ಮಂಗಳವಾರ ನಿಧನರಾದ ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ಅವರ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರು ಇಂದು(ಬುಧವಾರ) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಅಗಡಿ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸಾಂತ್ವನ ಹೇಳಿದರು

ಕೊಪ್ಪಳದ ಕಲ್ಯಾಣ ನಗರದಲ್ಲಿರುವ ವಿರೂಪಾಕ್ಷಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ತಮ್ಮೊಂದಿಗೆ ಅವರಿಗಿದ್ದ ಒಡನಾಟವನ್ನು ಸ್ಮರಿಸಿದರು. ಅಲ್ಲದೇ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಕುರಿತು ಮಾತನಾಡಿದ ಶೆಟ್ಟರ್​, ವಿರೂಪಾಕ್ಷಪ್ಪ ಅವರು ಶಾಸಕರಾಗಿ ಮತ್ತು ಕೆಲವೇ ದಿನಗಳು ಮಾತ್ರ ಸಚಿವರಾಗಿದ್ದರು. ಜನರಿಗೆ ಒಳ್ಳೆಯ ಕೆಲಸ ಮಾಡಿದ್ದರು. ತಾವು ಸಿಎಂ ಆದಾಗ, ಸಚಿವರಾದಾಗ ಕೊಪ್ಪಳದ ಸಾರ್ವಜನಿಕರ ಹಿತಾಸಕ್ತಿ ದೃಷ್ಠಿಯಿಂದ ಒಳ್ಳೆಯ ಕೆಲಸಗಳಿಗಾಗಿ ಭೇಟಿ ಮಾಡುತ್ತಿದ್ದರು ಎಂದು ನೆನಪಿಸಿಕೊಂಡರು.

ಓದಿ: ದೇಶದಲ್ಲಿ ಕಾಂಗ್ರೆಸ್ ಹಾಸ್ಯಾಸ್ಪದ ಪಕ್ಷ: ಸಚಿವ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.