ಮಿಯಾಪುರ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಪ್ರಕರಣ: ಡಿಸಿ, ಎಸ್​ಪಿಗೆ ನೋಟಿಸ್​

author img

By

Published : Sep 23, 2021, 12:36 PM IST

ದೇವಸ್ಥಾನ

ಕುಷ್ಟಗಿ ತಾಲೂಕಿನ ಮೀಯಾಪುರ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗವು ಸಮಗ್ರ ವರದಿ ಕೇಳಿದೆ.

ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ಮೀಯಾಪುರ ಗ್ರಾಮದಲ್ಲಿ ಮೂರು ವರ್ಷದ ಮಗು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ದೇವಾಲಯ ಅಶುದ್ಧಗೊಂಡಿದೆ ಎಂದು ಪಾಲಕರಿಗೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದೆ.

ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ ಅವರು, ಸದರಿ ಆಯೋಗದ ಕಾರ್ಯದರ್ಶಿ ಮೂಲಕ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್, ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿ ಟಿ.ಶ್ರೀಧರ ಅವರಿಗೆ ಕುಷ್ಟಗಿ ತಾಲೂಕಿನ ಮೀಯಾಪುರ ಗ್ರಾಮದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿದ ಹಿನ್ನೆಲೆಯಲ್ಲಿ 25 ಸಾವಿರ ರೂ. ದಂಡ ವಿಧಿಸಿರುವ ಅವಮಾನವೀಯ ಕೃತ್ಯದ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಡಿಸಿಗೆ ನೋಟಿಸ್​
ಡಿಸಿಗೆ ನೋಟಿಸ್​

ಇದನ್ನೂ ಓದಿ: ಕೊಪ್ಪಳದ ಮಿಯಾಪುರ ಗ್ರಾಮದಲ್ಲಿದೆಯಾ ಅಸ್ಪೃಶ್ಯತೆ ಆಚರಣೆ...?

ಈ ಆದೇಶದಲ್ಲಿ, ಇನ್ನೂ ಅಸ್ಪೃಶ್ಯತೆ ಜೀವಂತವಾಗಿದೆ ಎಂಬುದಕ್ಕೆ ಇದು ನೈಜ ನಿರ್ದೇಶನ. ಇದು ಕಳವಳಕಾರಿ ಸಂಗತಿಯಾಗಿದ್ದು, ಈ ಕುರಿತು ಸಮಗ್ರ ವರದಿಯನ್ನು ಸದರಿ ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ:ಮಿಯಾಪುರ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಪ್ರಕರಣ: ಐವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.