ಬಸ್ ಬಾಗಿಲಿಲ್ಲಿ ಜೋತು ಬೀಳುವ ಕೊಪ್ಪಳ ವಿದ್ಯಾರ್ಥಿಗಳು.. ಪ್ರಾಣ ಪಣಕ್ಕಿಟ್ಟು ಪ್ರಯಾಣ

author img

By

Published : Sep 22, 2021, 2:35 PM IST

koppal

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಮುಳ್ಳಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆಯ ಕೆಲ ಗ್ರಾಮಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಬಸ್​ ಬಾಗಿಲಲ್ಲಿ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಕೊಪ್ಪಳ: ಜಿಲ್ಲೆಯ ಕೆಲ ಗ್ರಾಮಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆಯೇ ಇಲ್ಲ. ಪರಿಣಾಮ ವಿದ್ಯಾರ್ಥಿಗಳು ಬಸ್​ ಬಾಗಿಲಲ್ಲಿ ಜೋತುಬಿದ್ದು ಪ್ರಯಾಣಿಸಬೇಕಾದ ಪರಿಸ್ಥಿತಿ ಉಂಟಾಗಿದೆ.

ಜಿಲ್ಲೆಯ ನಾನಾ ಗ್ರಾಮಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲ. ಬಹುತೇಕ ಗ್ರಾಮಗಳಿಂದ ದಿನಾಲೂ ನೂರಾರು ಮಂದಿ ವಿದ್ಯಾರ್ಥಿಗಳು ನಗರ, ಪಟ್ಟಣ ಹಾಗೂ ಹೋಬಳಿ ಮಟ್ಟದ ಶಾಲಾ, ಕಾಲೇಜುಗಳಿಗೆ ಬರಲು ಈ ಸಾರಿಗೆ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ನಾನಾ ಗ್ರಾಮಗಳಿಗೆ ಆಗೊಮ್ಮೆ, ಈಗೊಮ್ಮೆ ಬಸ್‌ ಸಂಚಾರ ಮಾಡುತ್ತಿರುವುದರಿಂದಲೇ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಿ ಬರಲು ಹರಸಾಹಸ ಪಡುತ್ತಿರುವುದು ಕಂಡುಬಂದಿದೆ.

ಬಸ್​ನಲ್ಲಿ ಜೋತುಬಿದ್ದ ವಿದ್ಯಾರ್ಥಿಗಳು

ಕೊಪ್ಪಳ ತಾಲೂಕಿನ ಕುಣಕೇರಿ ಗ್ರಾಮದ ವಿದ್ಯಾರ್ಥಿಗಳು ಬಸ್ ಬಾಗಿಲಲ್ಲಿ ಜೋತು ಬಿದ್ದು ಪ್ರಯಾಣಿಸುವ ಸ್ಥಿತಿ ನಿರ್ಮಾಣವಾಗಿದೆ. ಕುಣಕೇರಿ ಗ್ರಾಮದಿಂದ ಕೊಪ್ಪಳಕ್ಕೆ ನೂರಾರು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದು, ಸಮರ್ಪಕ ಬಸ್ ಸೌಲಭ್ಯವಿಲ್ಲ. ಹೀಗಾಗಿ ಬರುವ ಬಸ್​ನಲ್ಲಿಯೇ ವಿದ್ಯಾರ್ಥಿಗಳು ಜೋತುಬಿದ್ದು ಪ್ರಯಾಣಿಸುತ್ತಿದ್ದಾರೆ. ಈ ವೇಳೆ ಅಪಾಯ ಸಂಭವಿಸಿದ್ರೆ ನಾವು ಹೊಣೆಯಲ್ಲ ಎಂದು ಕಂಡಕ್ಟರ್ ಹೇಳುತ್ತಾರೆ.

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಮರ್ಪಕವಾಗಿ ಬಸ್​ ಬಿಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.