ETV Bharat / state

ಅಂಜನಾದ್ರಿ ದೇಗುಲಕ್ಕೆ ಭೇಟಿ ನೀಡಿದ ಸಚಿವ ಸಿ.ಪಿ.ಯೋಗೇಶ್ವರ್​, ನಟಿ ಶೃತಿ

author img

By

Published : Jun 30, 2021, 2:21 PM IST

minister cp yogeshwar visits anjanadri temple
ಅಂಜನಾದ್ರಿ ದೇಗುಲಕ್ಕೆ ಭೇಟಿ ನೀಡಿದ ಸಚಿವ ಸಿ.ಪಿ.ಯೋಗೇಶ್ವರ್​, ನಟಿ ಶೃತಿ

ಹಂಪಿಯಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿದ ಇಬ್ಬರೂ ಸುಮಾರು 572 ಮೆಟ್ಟಿಲುಗಳ ಎತ್ತರದಲ್ಲಿರುವ ಬೆಟ್ಟ ಹತ್ತಿದರು. ದೇವರ ದರ್ಶನದ ಬಳಿಕ ದೇಗುಲದ ಆವರಣದಲ್ಲಿಯೇ ಉಪಹಾರ ಸೇವಿಸಿದರು.

ಗಂಗಾವತಿ: ಪ್ರವಾಸೋದ್ಯಮ‌ ಸಚಿವ ಸಿ.ಪಿ. ಯೋಗೇಶ್ವರ್​​ ಹಾಗೂ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ನಟಿ ಶೃತಿ ತಾಲೂಕಿನ ಅಂಜನಾದ್ರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಅಂಜನಾದ್ರಿ ದೇಗುಲಕ್ಕೆ ಭೇಟಿ ನೀಡಿದ ಸಚಿವ ಸಿ.ಪಿ.ಯೋಗೇಶ್ವರ್​, ನಟಿ ಶೃತಿ

ಹಂಪಿಯಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿದ ಇಬ್ಬರೂ ಸುಮಾರು 572 ಮೆಟ್ಟಿಲುಗಳ ಎತ್ತರದಲ್ಲಿರುವ ಬೆಟ್ಟ ಹತ್ತಿದರು. ದೇವರ ದರ್ಶನದ ಬಳಿಕ ದೇಗುಲದ ಆವರಣದಲ್ಲಿಯೇ ಉಪಹಾರ ಸೇವಿಸಿದರು. ಬಳಿಕ ಮಾತನಾಡಿದ ಸಚಿವ ಯೋಗೇಶ್ವರ್,​ ಪ್ರವಾಸೋದ್ಯಮ ಇಲಾಖೆಯಡಿ ಬರುವ ತಾಣಗಳ ಅಭಿವೃದ್ದಿ ವಿಚಾರವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲು ಬಂದಿದ್ದೇನೆ. ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಚಾರದ ಬಗ್ಗೆ ಮಾತನಾಡಲು ಇಚ್ಚಿಸುವುದಿಲ್ಲ ಎಂದರು. ಇದರ ಜೊತೆಗೆ, ಬಿಎಸ್​​ವೈ ನಮ್ಮ ನಾಯಕರು. ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಅಚ್ಚರಿಯ ಹೇಳಿಕೆಯನ್ನೂ ನೀಡಿದರು.

ಈ ಸಂದರ್ಭ ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಸ್ಥಳೀಯರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ವ್ಯಾಪ್ತಿಯನ್ನು ಬದಲಿಸಬೇಕು. ಇಲ್ಲವೇ ಅಭಿವೃದ್ಧಿಗೆ ಪೂರಕವಾಗಿ ನಿರ್ಮಾಣವಾಗುವ ಕಾಮಗಾರಿಗಳಿಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಬಳಿಕ ಸಚಿವ ಯೋಗೇಶ್ವರ್​​ ಹಾಗೂ ನಟಿ ಶೃತಿ ಆನೆಗೊಂದಿಯ ಪುರಾತನ ಶೈಲಿಯ ಅರಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಹಾಯಕ ಆಯುಕ್ತ ನಾರಾಯಣ ಕನಕ ರೆಡ್ಡಿ, ತಹಶೀಲ್ದಾರ್ ಯು.ನಾಗರಾಜ್ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.