ETV Bharat / state

ಕ್ಷೇತ್ರದ ಬಗ್ಗೆ ಅಲ್ಲ, ಕರ್ನಾಟಕದ ಬಗ್ಗೆ ಒಲವಿದೆ: ಬಿ.ವೈ. ವಿಜಯೇಂದ್ರ

author img

By

Published : Jul 25, 2022, 1:35 PM IST

ಪಕ್ಷ ನನಗೆ ಮತ್ತು ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ- ನಾವು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುತ್ತೇವೆ- ರಾಜ್ಯದ ಬಗ್ಗೆ ಒಲವಿದೆ ಅಂದ್ರು ಬಿ.ವೈ ವಿಜಯೇಂದ್ರ

BJP State Vice President BY Vijayendra
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕೊಪ್ಪಳ: ತಮಗೆ ಕರ್ನಾಟಕದ ಬಗ್ಗೆ ಒಲವಿದೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಾವು ಸಹ ಮುಂದಿನ ಸಿಎಂ ಆಕಾಂಕ್ಷಿ ಎಂದು ಹೇಳಿದರಾ ಎಂಬ ಚರ್ಚೆ ಈಗ ಶುರುವಾಗಿದೆ. ಇಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ನನಗೆ ಒಂದು ಕ್ಷೇತ್ರಕ್ಕಿಂತ ರಾಜ್ಯದ ಮೇಲೆ ಒಲವಿದೆ ಎಂದು ಹೇಳಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗ್ತಿದೆ.

ಸುಮಾರು 30 ರಿಂದ 40 ವರ್ಷಗಳ ಕಾಲ ಯಡಿಯೂರಪ್ಪ ಭಾರತೀಯ ಜನತಾ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಶಕ್ತಿ ಬಳಸಿಕೊಂಡು ಸ್ಪಷ್ಟವಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ನನಗೆ ಮತ್ತು ನನ್ನ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ. ನಾವು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುತ್ತೇವೆ. ಅಭಿವೃದ್ಧಿ ದೃಷ್ಟಿಯಿಂದ ಜನ ಬಿಜೆಪಿಯನ್ನು ಬೆಂಬಲಿಸುತ್ತಾರೆ. ಖಂಡಿತವಾಗಿಯೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಸ್ವಾಸವನ್ನು ಬಿಎಸ್​ವೈ ಪುತ್ರ ವ್ಯಕ್ತಪಡಿಸಿದ್ರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕಾಂಗ್ರೆಸ್​ನಲ್ಲಿ ನಾನು ಸಿಎಂ, ನೀನು ಸಿಎಂ ಹೇಳಿಕೆ ವಿಚಾರ ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್​ನಲ್ಲಿ ಈ ರೀತಿ ಸಿಎಂ ಪಟ್ಟಕ್ಕಾಗಿ ಮಾಡುತ್ತಿರುವ ಕಿತ್ತಾಟ ಬಿಜೆಪಿಗೆ ಲಾಭವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ರು.

ಇದನ್ನೂ ಓದಿ : ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆ, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.