ETV Bharat / state

ಟೋಲ್​​​​ಗೇಟ್​​​ನಲ್ಲಿ ಸ್ಥಳೀಯರಿಗೆ ಕೆಲಸ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

author img

By

Published : Jun 25, 2019, 1:05 PM IST

ಟೋಲ್ ಗೆಟ್ ನಲ್ಲಿ ಸ್ಥಳೀಯರಿಗೆ ಕೆಲಸ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಟೋಲ್​​ಗೇಟ್​​​ಗಳಲ್ಲಿ ಸ್ಥಳೀಯರನ್ನ ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದನ್ನು ಖಂಡಿಸಿ ಮತ್ತು ಉದ್ಯೋಗ ನೀಡುವಂತೆ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ನಿನ್ನೆ ಕುಷ್ಟಗಿ ತಾಲೂಕಿನಲ್ಲಿನ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆದಿತ್ತು. ಇಂದು ಕೊಪ್ಪಳ ತಾಲೂಕಿನ ಹಿಟ್ನಾಳ್ ಹಾಗೂ ಶಹಪುರ ಬಳಿಯ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ಮುಂದುವರೆದಿದೆ.

ಕೊಪ್ಪಳ : ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50 ಚತುಷ್ಪಥ ರಸ್ತೆಯಲ್ಲಿರುವ ಟೋಲ್​​​ಗೇಟ್​​​ಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಟೋಲ್​​ಗೇಟ್​​ ಬಂದ್ ಮಾಡಿ ಪ್ರತಿಭಟನೆ‌ ಮಾಡುತ್ತಿದ್ದಾರೆ.

ತಾಲೂಕಿನ ಹಿಟ್ನಾಳ್ ಹಾಗೂ ಶಹಪೂರ ಬಳಿ ಇರುವ ಟೋಲ್​​ಗೇಟ್​ಗಳನ್ನ ಬಂದ್ ಮಾಡಿ ಜಿಎಂಆರ್ ಕಂಪನಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್​​ ಭಯ್ಯಾಪುರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಟೋಲ್ ಗೇಟ್ ಬಂದ್‌ ಮಾಡಿ ಪ್ರತಿಭಟನೆ ನಡೆಯುತ್ತಿದೆ.

ಟೋಲ್ ಗೆಟ್ ನಲ್ಲಿ ಸ್ಥಳೀಯರಿಗೆ ಕೆಲಸ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಟೋಲ್​​​ಗೇಟ್​​ಗಳಲ್ಲಿ ಸ್ಥಳೀಯರನ್ನ ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದನ್ನು ಖಂಡಿಸಿ ಮತ್ತು ಉದ್ಯೋಗ ನೀಡುವಂತೆ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ನಿನ್ನೆ ಕುಷ್ಟಗಿ ತಾಲೂಕಿನಲ್ಲಿ ಟೋಲ್​​ಗೇಟ್​​ ಬಳಿ ಪ್ರತಿಭಟನೆ ನಡೆದಿತ್ತು. ಇಂದು ಕೊಪ್ಪಳ ತಾಲೂಕಿನ ಹಿಟ್ನಾಳ್ ಹಾಗೂ ಶಹಪುರ ಬಳಿಯ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ಮುಂದುವರೆದಿದೆ.

ಸ್ಥಳೀಯರನ್ನು ಕೆಲಸದಿಂದ ಏಕಾಏಕಿ ತೆಗೆದು ಹಾಕಿರುವ ಕುರಿತಂತೆ ಮತ್ತು ಈಗ ಉದ್ಭವವಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದು ಜಿಎಂಆರ್ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ. ನಿನ್ನೆ ಜಿಎಂಆರ್ ಕಂಪನಿ ಸಭೆಗೆ ಗೈರಾಗಿತ್ತು. ಇಂದು ಸಭೆಯ ಬಳಿಕ ಯಾವ ತೀರ್ಮಾನ ಹೊರಬೀಳುತ್ತೆ ಎಂಬುದರ ಮೇಲೆ ಎಲ್ಲವೂ ನಿಂತಿದೆ.

Intro:Body:ಕೊಪ್ಪಳ:- ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50 ಚತುಷ್ಪಥ ರಸ್ತೆಯಲ್ಲಿರುವ ಟೋಲ್ ಗೇಟ್ ಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ‌ ನಡೆಯುತ್ತಿದೆ. ತಾಲೂಕಿನ ಹಿಟ್ನಾಳ್ ಹಾಗೂ ಶಹಪೂರ ಬಳಿ ಇರುವ ಟೋಲ್ ಗೇಟ್ ಗಳನ್ನು ಬಂದ್ ಮಾಡಿ ಜಿಎಂಆರ್ ಕಂಪನಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಟೋಲ್ ಗೇಟ್ ಬಂದ್‌ ಮಾಡಿ ಪ್ರತಿಭಟನೆ ನಡೆಯುತ್ತಿದೆ.ಟೋಲ್ ಗೇಟ್ ಗಳಲ್ಲಿ ಸ್ಥಳೀಯರನ್ನ ಏಕಾಏಕಿ ಕೆಲಸರಿಂದ ತಗೆದು ಹಾಕಿದನ್ನು ಖಂಡಿಸಿ ಮತ್ತು ಉದ್ಯೋಗ ನೀಡುವಂತೆ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ನಿನ್ನೆ ಕುಷ್ಟಗಿ ತಾಲೂಕಿನಲ್ಲಿನ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆದಿತ್ತು. ಇಂದು ಕೊಪ್ಪಳ ತಾಲೂಕಿನ ಹಿಟ್ನಾಳ್ ಹಾಗೂ ಶಹಪೂರ ಬಳಿಯ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ಮುಂದುವರೆದಿದೆ. ಸ್ಥಳೀಯರನ್ನು ಕೆಲಸದಿಂದ ಏಕಾಏಕಿ ತೆಗೆದು ಹಾಕಿರುವ ಕುರಿತಂತೆ ಮತ್ತು ಈಗ ಉದ್ಭವವಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದು ಜಿಎಂಆರ್ ಕಂಪೆನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ. ನಿನ್ನೆ ಜಿಎಂಆರ್ ಕಂಪೆನಿ ಸಭೆಗೆ ಗೈರಾಗಿತ್ತು. ಇಂದು ಸಭೆಯ ಬಳಿಕ ಯಾವ ತೀರ್ಮಾನ ಹೊರಬೀಳುತ್ತೆ ಎಂಬುದರ ಮೇಲೆ ಎಲ್ಲವೂ ನಿಂತಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.