ETV Bharat / state

ಕೊರೊನಾ ಲಸಿಕೆ ದೇಶದ ಪ್ರತಿಯೊಬ್ಬರಿಗೂ ಸಿಗಬೇಕು: ಶಾಸಕ ರಾಘವೇಂದ್ರ ಹಿಟ್ನಾಳ್

author img

By

Published : Jan 16, 2021, 8:27 PM IST

ಹಿಟ್ನಾಳ್
ಹಿಟ್ನಾಳ್

ಕೊರೊನಾ ಸೋಂಕಿನಿಂದ ಅನೇಕ ಜನರು ಸಾವನ್ನಪ್ಪಿದ್ದು, ಈಗ ದೇಶದಲ್ಲಿ ವ್ಯಾಕ್ಸಿನ್ ನೀಡಿಕೆ ಪ್ರಾರಂಭವಾಗಿದೆ. ಆದಷ್ಟು ಬೇಗ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಿ ಸಾಮಾನ್ಯರಿಗೂ ನೀಡಬೇಕು ಎಂದು ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದರು.

ಕೊಪ್ಪಳ: ಆದಷ್ಟು ಬೇಗ ದೇಶದ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಸಿಗುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಒತ್ತಾಯಿಸಿದರು.

ನಗರದ ಜಿಲ್ಲಾಸ್ಪತ್ರೆಯ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ‌. ಈಗ ದೇಶದಲ್ಲಿ ವ್ಯಾಕ್ಸಿನ್ ನೀಡಿಕೆ ಪ್ರಾರಂಭವಾಗಿದೆ. ಆದಷ್ಟು ಬೇಗ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಬೇಕು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಾಘವೇಂದ್ರ ಹಿಟ್ನಾಳ್

ಮುಂದಿನ ದಿನಗಳಲ್ಲಿ ಕೊರೊನಾ ಲಸಿಕೆಯನ್ನು ದೇಶದ ಪ್ರತಿಯೊಬ್ಬರಿಗೂ ನೀಡುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.‌ರಾಘವೇಂದ್ರ ಹಿಟ್ನಾಳ್ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.