ETV Bharat / state

ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರುಗಳ್ಳತನ ಆರೋಪ: ತಹಶೀಲ್ದಾರ್ ಪರಿಶೀಲನೆ

author img

By

Published : Aug 19, 2023, 9:25 PM IST

Tehsildar and Irrigation Department officials Verified
ಪೈಪ್ಲೈನ್ ಅಳವಡಿಸಿ ನೀರು ಕಳ್ಳತನ,ತಹಸೀಲ್ದಾರ್ ನೀರಾವರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ

ಗಂಗಾವತಿ ತಾಲೂಕಿನ ದಾಸನಾಳ ಬಳಿ ಹಾದು ಹೋಗಿರುವ ತುಂಗಭದ್ರಾ ಎಡದಂಡೆ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ನೀರನ್ನು ಕದಿಯುತ್ತಿರುವ ಮಾಹಿತಿ ಗೊತ್ತಾಗಿ ಸ್ಥಳಕ್ಕೆ ತಹಸೀಲ್ದಾರ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಬಂದು ಪರಿಶೀಲಿಸಿದರು.

ಗಂಗಾವತಿ(ಕೊಪ್ಪಳ): ತುಂಗಭದ್ರಾ ಎಡದಂಡೆಯ ಮುಖ್ಯ ಕಾಲುವೆಗೆ ರಂಧ್ರ ಕೊರೆದು ಅನಧಿಕೃತವಾಗಿ ಪೈಪ್ಲೈನ್ ಅಳವಡಿಸಿ ನೀರು ಕಳ್ಳತನ ಮಾಡಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆ ತಹಶೀಲ್ದಾರ್ ಮಂಜುನಾಥ ಹಿರೇಮಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ದಾಸನಾಳ ಬಳಿ ಹಾದು ಹೋಗಿರುವ ತುಂಗಭದ್ರಾ ಎಡದಂಡೆ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ನೀರನ್ನು ಕದಿಯುತ್ತಿರುವ ಮಾಹಿತಿ ಗೊತ್ತಾಗಿ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಆಗಮಿಸಿ ವಿವಿಧ ಕಡೆ ಪರಿಶೀಲನೆ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಮಂಜುನಾಥ್ ಹಿರೇಮಠ, ಮೇಲ್ಭಾಗದಲ್ಲಿ ನೀರು ಕಳ್ಳತನ ಮಾಡುತ್ತಿರುವ ಪರಿಣಾಮ ರಾಯಚೂರಿನವರೆಗೆ ತಲುಪಬೇಕಿರುವ ಕುಡಿಯುವ ಮತ್ತು ಕೃಷಿ ಚಟುವಟಿಕೆಯ ಉದ್ದೇಶದ ನೀರಿನ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ ಎಂಬ ದೂರು ಕೇಳಿ ಬಂದಿವೆ. ಈ ಹಿನ್ನೆಲೆ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಲಾಗಿದ್ದು, ಮೇಲ್ನೋಟಕ್ಕೆ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಅಲ್ಲದೇ ನಮ್ಮ ಭಾಗದಲ್ಲಿ ಹರಿಯುವ ಕಾಲುವೆಯಲ್ಲಿನ ನೀರಿನ ಪ್ರಮಾಣ 13 ಗೇಜ್ ಪಾಯಿಂಟ್ ಇರಬೇಕು ಎಂದು ನೀರಾವರಿ ಇಲಾಖೆ ಮಾನದಂಡ ನಿಗದಿ ಪಡಿಸಿದರೂ, ದಾಸನಾಳದ ಬಳಿ ವಾಟರ್ ಗೇಜ್ಪಾಯಿಂಟ್ಗೆ ಭೇಟಿ ನೀಡಿದಾಗ 13 ಪಾಯಿಂಟ್ ನೀರಿನ ಹರಿವಿತ್ತು ಎಂದು ತಿಳಿಸಿದರು.

ಕಾಲುವೆಯಲ್ಲಿನ ನೀರು ಸಮರ್ಪಕ ನಿರ್ವಹಣೆಗಾಗಿ ಜಿಲ್ಲಾಧಿಕಾರಿ, ನಾನಾ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಟಾಸ್ಕಪೋರ್ಸ್​ ಸಮಿತಿ ರಚಿಸಿದ್ದಾರೆ. ಈ ತಂಡವು ಕಾಲುವೆ ಮೇಲೆ ನಿರಂತರ ಗಸ್ತು ತಿರುಗಿ ಕಣ್ಗಾವಲು ಇರಿಸಲಿದೆ ಎಂದು ತಹಶೀಲ್ದಾರ್ ಹೇಳಿದರು. ಈ ಸಂದರ್ಭದಲ್ಲಿ ವಡ್ಡರಹಟ್ಟಿ ನಂಬರ್-2 ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಂ.ಎಸ್. ಗೋಡೆಕರ್ ಇದ್ದರು.

ರೈತರೊಂದಿಗೆ ಒಂದು ದಿನ ಸಿಇಒ ಪಾಂಡೆ: 'ರೈತರೊಂದಿಗೆ ಒಂದು ದಿನ' ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ರಾಹುಲ್​ ರತ್ನಂ ಪಾಂಡೆ ಅವರು ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಾಲೂಕಿನ ಮರಳಿ ಹೋಬಳಿಯ ಕೋಟಯ್ಯ ಕ್ಯಾಂಪಿನಲ್ಲಿ ರೈತರೊಂದಿಗೆ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದ್ದರು. ಬಿಳಿ ಪಂಚೆ, ಟಿ ಶರ್ಟ್‌ ಧರಿಸಿದ್ದ ಸಿಇಓ ಅವರು ಸಸಿ ನಾಟಿ ಬಳಿಕ ಹೊಲದಲ್ಲೇ ಕುಳಿತು ಮಧ್ಯಾಹ್ನದ ಭೋಜನ ಸವಿದರು.

ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

ಇದನ್ನೂಓದಿ: ಮಳೆಗಾಲದಲ್ಲಿ ರೈತರ ನಿದ್ದೆ ಕದ್ದ ಬೆಣ್ಣೆಹಳ್ಳ: ಶಾಶ್ವತ ಪರಿಹಾರಕ್ಕೆ ಮತ್ತೊಂದು ಹೋರಾಟಕ್ಕೆ ಸಿದ್ಧವಾದ ರೈತ ಸಮುದಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.