ETV Bharat / state

'ಪಿವಿಆರ್​ಗಳಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರ': ವಿಜಯೇಂದ್ರ

author img

By ETV Bharat Karnataka Team

Published : Jan 20, 2024, 2:10 PM IST

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಅಯೋಧ್ಯೆ ಮತ್ತು ಕರ್ನಾಟಕದ ಕೊಡುಗೆ ಕುರಿತಾಗಿ ಬಿ ವೈ ವಿಜಯೇಂದ್ರ ಅವರು ಮಾತನಾಡಿದ್ದಾರೆ.

BY vijayendra
ಬಿ.ವೈ ವಿಜಯೇಂದ್ರ
ಶಾಸಕ ಬಿ.ವೈ ವಿಜಯೇಂದ್ರ ಮಾತನಾಡಿರುವುದು...

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಇದೇ ಜ. 22ರಂದು ನಡೆಯಲಿದೆ. ಆ ದಿನ ಅಶಾಂತಿ, ಅಡ್ಡಿ-ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜ‌. 22ರಂದು ಸರ್ಕಾರಿ ರಜೆ ಘೋಷಿಸಲು ಮನವಿ ಮಾಡಿಕೊಂಡರು. ಪಿವಿಆರ್ ಚಿತ್ರಮಂದಿರಗಳಲ್ಲಿ ನೇರಪ್ರಸಾರ ಇರಲಿದೆ. ಹಾಗೇ, ಜನರು ಉತ್ತರಾಭಿಮುಖವಾಗಿ 5 ದೀಪ ಬೆಳಗಿಸುವಂತೆ ವಿನಂತಿಸಿದರು.

ಸೋಮವಾರ ಜರುಗಲಿರುವ ಐತಿಹಾಸಿಕ ಘಳಿಗೆಗೆ ರಾಮಭಕ್ತರಷ್ಟೇ ಅಲ್ಲ, ಇಡೀ ಜಗತ್ತಿನ ಅನೇಕ ದೇಶಗಳಲ್ಲಿ ಕೂಡ ಉತ್ಸಾಹ ಕಾಣುತ್ತಿದೆ. ಪ್ರಭು ಶ್ರೀರಾಮಚಂದ್ರ ಮತ್ತು ಕರ್ನಾಟಕದ ಸಂಬಂಧ ನಿನ್ನೆ ಮೊನ್ನೆಯದಲ್ಲ. ರಾಮಾಯಣ ಯುಗದಿಂದಲೂ ಈ ಸಂಬಂಧ ಇದೆ. ಸೀತಾಮಾತೆಯ ಅಪಹರಣದ ನಂತರ ಶ್ರೀರಾಮನು ಲಕ್ಷ್ಮಣನ ಜೊತೆ ಕಿಷ್ಕಿಂಧೆಗೆ (ಇಂದಿನ ಹಂಪಿ) ಪ್ರಯಾಣ ಬೆಳೆಸಿದ ಕುರುಹುಗಳಿವೆ. ಕೊಪ್ಪಳದ ಅಂಜನಾದ್ರಿ ಬೆಟ್ಟ ಹನುಮಂತನ ಜನ್ಮಭೂಮಿ ಎಂದು ವಿವರಿಸಿದರು.

ಭಾರತೀಯ ಸಂಸ್ಕೃತಿಯ ಪುನರುಜ್ಜೀವನ: ಶ್ರೀರಾಮನು ವಾನರ ಸೇನೆಯನ್ನು ಒಗ್ಗೂಡಿಸಿದ್ದು ಕೂಡ ಕರ್ನಾಟಕದಲ್ಲೇ ಎಂದು ಉಲ್ಲೇಖಿಸಿದರು. ತೊರವೆ ರಾಮಾಯಣ ಮೇರುಕೃತಿ ಎಂದ ಅವರು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಸಂಸ್ಕೃತಿಯ ಪುನರುಜ್ಜೀವನ ಆಗುತ್ತಿದೆ. ಇದು ರಾಮಭಕ್ತರು, ಹಿಂದೂಗಳಲ್ಲಿ ಸಂತಸಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿ ಆಗುತ್ತಿದೆ. ಉಜ್ಜೈನಿ ಅಭಿವೃದ್ಧಿ, ನಮೋ ಗಂಗೆ ಕಾರ್ಯಕ್ರಮಗಳು ಪ್ರಾಚೀನ ಪರಂಪರೆಯ ಪುನರುಜ್ಜೀವನಕ್ಕೆ ಸಾಕ್ಷಿ. ನರೇಂದ್ರ ಮೋದಿ ಅವರ ದೂರದೃಷ್ಟಿ ಇದಕ್ಕೆ ಕಾರಣ ಎಂದು ವಿವರಿಸಿದರು. ಕಾಂಗ್ರೆಸ್ ಸರ್ಕಾರ ಗೊಂದಲ, ದ್ವಂದ್ವ ನಿಲುವಿನಲ್ಲಿದೆ. ರಾಜ್ಯ ಸರ್ಕಾರ ಕರಸೇವಕ ಶ್ರೀಕಾಂತ ಪೂಜಾರಿಯನ್ನು ದುರುದ್ದೇಶದಿಂದ ಬಂಧಿಸಿತ್ತು. ದೇಶದಲ್ಲಿ ಕುಣಿದು ಕುಪ್ಪಳಿಸಿದ ವಾತಾವರಣವನ್ನು ಕಲುಷಿತಗೊಳಿಸಲು ಈ ಬಂಧನ ನಡೆದಿತ್ತು ಎಂದು ಟೀಕಿಸಿದರು.

ಬಿ.ಕೆ ಹರಿಪ್ರಸಾದ್ ಕಾಂಗ್ರೆಸ್ ಟಾರ್ಗೆಟ್?! ಕಾಂಗ್ರೆಸ್ಸಿನ ಬಿ.ಕೆ ಹರಿಪ್ರಸಾದ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರೂ ಹೇಳಿಕೆ ಕೊಟ್ಟಿದ್ದಾರೆ. ಆದ್ದರಿಂದ ಅಹಿತಕರ ಘಟನೆ ಆಗದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ಬಿ.ಕೆ ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆಯೇ ಅಥವಾ ಕೇಂದ್ರ ಸರ್ಕಾರವೇ? ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ನುಡಿದರು. ಇನ್ನು, ಕಾಂಗ್ರೆಸ್ಸಿಗರು ಎಲ್ಲೆಡೆ ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣ ಮತ್ತು ರಾಮಭಕ್ತರ ಕುರಿತ ತಿರಸ್ಕಾರದ ನಡವಳಿಕೆ ಸಾಕಷ್ಟು ಟೀಕೆಗೆ ಒಳಗಾಗಿದೆ ಎಂದರು.

ಅಯೋಧ್ಯೆಗೆ ಕರ್ನಾಟಕದ ಕೊಡುಗೆ: ಅತಿಹೆಚ್ಚು ಕರಸೇವಕರು ಕರ್ನಾಟಕದಿಂದ ಹೋಗಿದ್ದರು. ಯಡಿಯೂರಪ್ಪ, ರಾಮಚಂದ್ರೇಗೌಡ ಸೇರಿ ಅನೇಕ ಹಿರಿಯರು ಭಾಗವಹಿಸಿದ್ದರು. ರಾಮಮಂದಿರದ ಉಸ್ತುವಾರಿಯನ್ನು ಕನ್ನಡಿಗರೇ ನೋಡಿಕೊಳ್ಳುತ್ತಿದ್ದಾರೆ. ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ. ಅವರ ಜೊತೆ ಕರ್ನಾಟಕದ 6 ಶಿಲ್ಪಿಗಳು ಭಾಗವಹಿಸಿದ್ದರು. ಕರ್ನಾಟಕದ ಪೇಜಾವರ ಶ್ರೀಗಳು ಟ್ರಸ್ಟಿ ಎಂದು ಹೇಳಿದರು.

ಕರ್ನಾಟಕದ ಶ್ರೀಗಂಧದ ಮರ, ಶ್ರೀಗಂಧದ ಎಣ್ಣೆ ಬಳಸುತ್ತಿದ್ದಾರೆ. ಅಯೋಧ್ಯೆಯಲ್ಲಿ ವಿನಾಯಕನನ್ನು ಅರಳಿಸಿದವರು ಉತ್ತರ ಕನ್ನಡ ಜಿಲ್ಲೆಯ ಕೆಕ್ಕೆರಿನ ಶಿಲ್ಪಿ ವಿನಾಯಕ ಗೌಡ. ಕರ್ನಾಟಕದ ಸಾದರಹಳ್ಳಿಯಿಂದ 800 ಟನ್ ಶಿಲೆಯನ್ನು ರಾಮಮಂದಿರ ನಿರ್ಮಾಣದಲ್ಲಿ ಬಳಸಲಾಗಿದೆ. ಅಯೋಧ್ಯೆಯಲ್ಲಿ ಜನವರಿ 19 ರಿಂದ 48 ದಿನಗಳ ಕಾಲಕ್ಕೆ ರಾಮನಗರದ ವಿಜಯಕುಮಾರ್ ಮತ್ತು 10 ಕಲಾವಿದರಿಂದ ಮಂಗಳವಾದ್ಯ ಸೇವೆ ಆರಂಭಗೊಂದಿದೆ. ಕರ್ನಾಟಕದ ಹನುಮಾನ್ ಗ್ರಾನೈಟ್ಸ್ ರಾಮಮಂದಿರದ ಸಂಪೂರ್ಣ ಶಿಲೆಗಳನ್ನು ಪೂರೈಸಿದೆ. ಕರ್ನಾಟಕದ ರಾಜೇಶ್ ಶೆಟ್ಟಿ ಅವರ ಕಂಪನಿ ರಾಮಮಂದಿರದ ಸಂಪೂರ್ಣ ವಿದ್ಯುತ್ ಸಂಪರ್ಕದ ಕಾರ್ಯ ಪೂರೈಸುತ್ತಿದೆ. ಧಾರವಾಡದಿಂದ ರಾಮನಿಗಾಗಿ ಎರಡು ವಿಶೇಷ ಕಂಬಳಿಯನ್ನು ಕಳುಹಿಸಲಾಗಿದೆ. ರಾಮಮಂದಿರದ ದ್ವಾರವನ್ನು ಕೆತ್ತಿರುವುದು ಕೊಪ್ಪಳದ ರಾಮಮೂರ್ತಿ ಸ್ವಾಮಿ. ಅಯೋಧ್ಯೆ ರೈಲು ನಿಲ್ದಾಣಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿದ್ದು ಕರ್ನಾಟಕದ ಮೂಡಬಿದರೆಯ ಶ್ರೀ ರೋನಾಲ್ಡ್ ಸಿಲ್ಟನ್ ಡಿಸೋಜಾ ಮಾಲೀಕತ್ವದ ಲೆಕ್ಸಾ ಲೈಟಿಂಗ್ ಕಂಪೆನಿ ಎಂದು ಕರ್ನಾಟಕದ ಕೊಡುಗೆಯನ್ನು ವಿವರಿಸಿದರು.

ಇದನ್ನೂ ಓದಿ: ಬೆಂಗಳೂರು: ಪೊಲೀಸ್​ ಸಬ್ ಇನ್‌ಸ್ಪೆಕ್ಟರ್ ಕೈಯಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ

ಜನವರಿ 22ರ ನಂತರ ಕರ್ನಾಟಕದ ರಾಮಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಿಂದ 35 ಸಾವಿರ ರಾಮಭಕ್ತರು ಜನವರಿ 31 ರಿಂದ ಮಾರ್ಚ್ 25ರ ವರೆಗೆ ಸುಮಾರು 25 ರೈಲುಗಳಲ್ಲಿ ಅಯೋಧ್ಯೆಗೆ ತಲುಪುತ್ತಾರೆ. ಇದರ ವೆಚ್ಚವನ್ನು ಸ್ವಂತವಾಗಿ ಭರಿಸುತ್ತಾರೆ. ಈ ಅಭಿಯಾನದ ಸಂಚಾಲಕರಾಗಿ ಬಿಜೆಪಿ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಸಹ-ಸಂಚಾಲಕರಾಗಿ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಯೋಧ್ಯೆ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್: ವಿಡಿಯೋ

ಪ್ರತೀ ರಾಮಭಕ್ತರಿಗೆ ಕ್ಯೂ ಆರ್ ಕೋಡ್ ಹೊಂದಿರುವ ಐಡಿ ಕಾರ್ಡನ್ನು ವಿತರಿಸಲಾಗುತ್ತದೆ. ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಿಂದ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಯೋಧ್ಯೆಯಲ್ಲಿ ಕನ್ನಡ ಭಾಷೆಯ ಹೆಲ್ಪ್​ಲೈನ್​​ ಕೇಂದ್ರವಿದ್ದು ಕರ್ನಾಟಕದ ರಾಮಭಕ್ತರಿಗೆ ಕನ್ನಡ ಭಾಷೆಯಲ್ಲೇ ಅನೌನ್ಸ್​ಮೆಂಟ್​​ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಯೋಧ್ಯೆಯಲ್ಲಿ ವಸತಿಗಾಗಿ ವ್ಯವಸ್ಥಿತವಾದ ಜರ್ಮನ್ ಟೆಂಟ್‍ಹೌಸ್‍ಗಳಿದ್ದು, ಸ್ನಾನಗೃಹ, ಶೌಚಾಲಯ ವ್ಯವಸ್ಥೆಗಳಿರುತ್ತದೆ. 48 ಕಡೆ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ 2 ಕಡೆ ಕರ್ನಾಟಕದ ರಾಮಭಕ್ತರಿಗಾಗಿ ಭೋಜನದ ವ್ಯವಸ್ಥೆ ಮಾಡಲಾಗಿದೆ. ಒಂದು ರೈಲಿನಲ್ಲಿ 1,500 ಜನರು ಪ್ರಯಾಣ ಮಾಡಲಿದ್ದಾರೆ. ಪ್ರತೀ ರೈಲಿಗೆ ರೈಲ್ ಪ್ರಮುಖ್ ಮತ್ತು ಬೋಗಿ ಪ್ರಮುಖ್ ಇದ್ದು, ಊಟ ಉಪಚಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಪರಿವರ್ತನಾ ಪಥ ರಾಮಮಂದಿರ ರಥ ಬಿಡುಗಡೆ: ಇದೇ ಸಂದರ್ಭದಲ್ಲಿ ಅವರು ಪರಿವರ್ತನಾ ಪಥ ರಾಮಮಂದಿರ ರಥ ಪುಸ್ತಕವನ್ನು ಬಿಡುಗಡೆ ಮಾಡಿದರು. ಅಯೋಧ್ಯೆಯ ಪ್ರಮುಖ ಘಟನಾವಳಿಗಳನ್ನು ಇದು ಒಳಗೊಂಡಿದೆ. ಕಮಲ ಪಥ ತಂಡವು ಈ ಪುಸ್ತಕವನ್ನು ಸಿದ್ಧಪಡಿಸಿದೆ. ಸುದ್ದಿಗೋಷ್ಠಿ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರು ಉಪಸ್ಥಿತರಿದ್ದರು.

ಶಾಸಕ ಬಿ.ವೈ ವಿಜಯೇಂದ್ರ ಮಾತನಾಡಿರುವುದು...

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಇದೇ ಜ. 22ರಂದು ನಡೆಯಲಿದೆ. ಆ ದಿನ ಅಶಾಂತಿ, ಅಡ್ಡಿ-ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜ‌. 22ರಂದು ಸರ್ಕಾರಿ ರಜೆ ಘೋಷಿಸಲು ಮನವಿ ಮಾಡಿಕೊಂಡರು. ಪಿವಿಆರ್ ಚಿತ್ರಮಂದಿರಗಳಲ್ಲಿ ನೇರಪ್ರಸಾರ ಇರಲಿದೆ. ಹಾಗೇ, ಜನರು ಉತ್ತರಾಭಿಮುಖವಾಗಿ 5 ದೀಪ ಬೆಳಗಿಸುವಂತೆ ವಿನಂತಿಸಿದರು.

ಸೋಮವಾರ ಜರುಗಲಿರುವ ಐತಿಹಾಸಿಕ ಘಳಿಗೆಗೆ ರಾಮಭಕ್ತರಷ್ಟೇ ಅಲ್ಲ, ಇಡೀ ಜಗತ್ತಿನ ಅನೇಕ ದೇಶಗಳಲ್ಲಿ ಕೂಡ ಉತ್ಸಾಹ ಕಾಣುತ್ತಿದೆ. ಪ್ರಭು ಶ್ರೀರಾಮಚಂದ್ರ ಮತ್ತು ಕರ್ನಾಟಕದ ಸಂಬಂಧ ನಿನ್ನೆ ಮೊನ್ನೆಯದಲ್ಲ. ರಾಮಾಯಣ ಯುಗದಿಂದಲೂ ಈ ಸಂಬಂಧ ಇದೆ. ಸೀತಾಮಾತೆಯ ಅಪಹರಣದ ನಂತರ ಶ್ರೀರಾಮನು ಲಕ್ಷ್ಮಣನ ಜೊತೆ ಕಿಷ್ಕಿಂಧೆಗೆ (ಇಂದಿನ ಹಂಪಿ) ಪ್ರಯಾಣ ಬೆಳೆಸಿದ ಕುರುಹುಗಳಿವೆ. ಕೊಪ್ಪಳದ ಅಂಜನಾದ್ರಿ ಬೆಟ್ಟ ಹನುಮಂತನ ಜನ್ಮಭೂಮಿ ಎಂದು ವಿವರಿಸಿದರು.

ಭಾರತೀಯ ಸಂಸ್ಕೃತಿಯ ಪುನರುಜ್ಜೀವನ: ಶ್ರೀರಾಮನು ವಾನರ ಸೇನೆಯನ್ನು ಒಗ್ಗೂಡಿಸಿದ್ದು ಕೂಡ ಕರ್ನಾಟಕದಲ್ಲೇ ಎಂದು ಉಲ್ಲೇಖಿಸಿದರು. ತೊರವೆ ರಾಮಾಯಣ ಮೇರುಕೃತಿ ಎಂದ ಅವರು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಸಂಸ್ಕೃತಿಯ ಪುನರುಜ್ಜೀವನ ಆಗುತ್ತಿದೆ. ಇದು ರಾಮಭಕ್ತರು, ಹಿಂದೂಗಳಲ್ಲಿ ಸಂತಸಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿ ಆಗುತ್ತಿದೆ. ಉಜ್ಜೈನಿ ಅಭಿವೃದ್ಧಿ, ನಮೋ ಗಂಗೆ ಕಾರ್ಯಕ್ರಮಗಳು ಪ್ರಾಚೀನ ಪರಂಪರೆಯ ಪುನರುಜ್ಜೀವನಕ್ಕೆ ಸಾಕ್ಷಿ. ನರೇಂದ್ರ ಮೋದಿ ಅವರ ದೂರದೃಷ್ಟಿ ಇದಕ್ಕೆ ಕಾರಣ ಎಂದು ವಿವರಿಸಿದರು. ಕಾಂಗ್ರೆಸ್ ಸರ್ಕಾರ ಗೊಂದಲ, ದ್ವಂದ್ವ ನಿಲುವಿನಲ್ಲಿದೆ. ರಾಜ್ಯ ಸರ್ಕಾರ ಕರಸೇವಕ ಶ್ರೀಕಾಂತ ಪೂಜಾರಿಯನ್ನು ದುರುದ್ದೇಶದಿಂದ ಬಂಧಿಸಿತ್ತು. ದೇಶದಲ್ಲಿ ಕುಣಿದು ಕುಪ್ಪಳಿಸಿದ ವಾತಾವರಣವನ್ನು ಕಲುಷಿತಗೊಳಿಸಲು ಈ ಬಂಧನ ನಡೆದಿತ್ತು ಎಂದು ಟೀಕಿಸಿದರು.

ಬಿ.ಕೆ ಹರಿಪ್ರಸಾದ್ ಕಾಂಗ್ರೆಸ್ ಟಾರ್ಗೆಟ್?! ಕಾಂಗ್ರೆಸ್ಸಿನ ಬಿ.ಕೆ ಹರಿಪ್ರಸಾದ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರೂ ಹೇಳಿಕೆ ಕೊಟ್ಟಿದ್ದಾರೆ. ಆದ್ದರಿಂದ ಅಹಿತಕರ ಘಟನೆ ಆಗದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ಬಿ.ಕೆ ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆಯೇ ಅಥವಾ ಕೇಂದ್ರ ಸರ್ಕಾರವೇ? ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ನುಡಿದರು. ಇನ್ನು, ಕಾಂಗ್ರೆಸ್ಸಿಗರು ಎಲ್ಲೆಡೆ ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣ ಮತ್ತು ರಾಮಭಕ್ತರ ಕುರಿತ ತಿರಸ್ಕಾರದ ನಡವಳಿಕೆ ಸಾಕಷ್ಟು ಟೀಕೆಗೆ ಒಳಗಾಗಿದೆ ಎಂದರು.

ಅಯೋಧ್ಯೆಗೆ ಕರ್ನಾಟಕದ ಕೊಡುಗೆ: ಅತಿಹೆಚ್ಚು ಕರಸೇವಕರು ಕರ್ನಾಟಕದಿಂದ ಹೋಗಿದ್ದರು. ಯಡಿಯೂರಪ್ಪ, ರಾಮಚಂದ್ರೇಗೌಡ ಸೇರಿ ಅನೇಕ ಹಿರಿಯರು ಭಾಗವಹಿಸಿದ್ದರು. ರಾಮಮಂದಿರದ ಉಸ್ತುವಾರಿಯನ್ನು ಕನ್ನಡಿಗರೇ ನೋಡಿಕೊಳ್ಳುತ್ತಿದ್ದಾರೆ. ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ. ಅವರ ಜೊತೆ ಕರ್ನಾಟಕದ 6 ಶಿಲ್ಪಿಗಳು ಭಾಗವಹಿಸಿದ್ದರು. ಕರ್ನಾಟಕದ ಪೇಜಾವರ ಶ್ರೀಗಳು ಟ್ರಸ್ಟಿ ಎಂದು ಹೇಳಿದರು.

ಕರ್ನಾಟಕದ ಶ್ರೀಗಂಧದ ಮರ, ಶ್ರೀಗಂಧದ ಎಣ್ಣೆ ಬಳಸುತ್ತಿದ್ದಾರೆ. ಅಯೋಧ್ಯೆಯಲ್ಲಿ ವಿನಾಯಕನನ್ನು ಅರಳಿಸಿದವರು ಉತ್ತರ ಕನ್ನಡ ಜಿಲ್ಲೆಯ ಕೆಕ್ಕೆರಿನ ಶಿಲ್ಪಿ ವಿನಾಯಕ ಗೌಡ. ಕರ್ನಾಟಕದ ಸಾದರಹಳ್ಳಿಯಿಂದ 800 ಟನ್ ಶಿಲೆಯನ್ನು ರಾಮಮಂದಿರ ನಿರ್ಮಾಣದಲ್ಲಿ ಬಳಸಲಾಗಿದೆ. ಅಯೋಧ್ಯೆಯಲ್ಲಿ ಜನವರಿ 19 ರಿಂದ 48 ದಿನಗಳ ಕಾಲಕ್ಕೆ ರಾಮನಗರದ ವಿಜಯಕುಮಾರ್ ಮತ್ತು 10 ಕಲಾವಿದರಿಂದ ಮಂಗಳವಾದ್ಯ ಸೇವೆ ಆರಂಭಗೊಂದಿದೆ. ಕರ್ನಾಟಕದ ಹನುಮಾನ್ ಗ್ರಾನೈಟ್ಸ್ ರಾಮಮಂದಿರದ ಸಂಪೂರ್ಣ ಶಿಲೆಗಳನ್ನು ಪೂರೈಸಿದೆ. ಕರ್ನಾಟಕದ ರಾಜೇಶ್ ಶೆಟ್ಟಿ ಅವರ ಕಂಪನಿ ರಾಮಮಂದಿರದ ಸಂಪೂರ್ಣ ವಿದ್ಯುತ್ ಸಂಪರ್ಕದ ಕಾರ್ಯ ಪೂರೈಸುತ್ತಿದೆ. ಧಾರವಾಡದಿಂದ ರಾಮನಿಗಾಗಿ ಎರಡು ವಿಶೇಷ ಕಂಬಳಿಯನ್ನು ಕಳುಹಿಸಲಾಗಿದೆ. ರಾಮಮಂದಿರದ ದ್ವಾರವನ್ನು ಕೆತ್ತಿರುವುದು ಕೊಪ್ಪಳದ ರಾಮಮೂರ್ತಿ ಸ್ವಾಮಿ. ಅಯೋಧ್ಯೆ ರೈಲು ನಿಲ್ದಾಣಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿದ್ದು ಕರ್ನಾಟಕದ ಮೂಡಬಿದರೆಯ ಶ್ರೀ ರೋನಾಲ್ಡ್ ಸಿಲ್ಟನ್ ಡಿಸೋಜಾ ಮಾಲೀಕತ್ವದ ಲೆಕ್ಸಾ ಲೈಟಿಂಗ್ ಕಂಪೆನಿ ಎಂದು ಕರ್ನಾಟಕದ ಕೊಡುಗೆಯನ್ನು ವಿವರಿಸಿದರು.

ಇದನ್ನೂ ಓದಿ: ಬೆಂಗಳೂರು: ಪೊಲೀಸ್​ ಸಬ್ ಇನ್‌ಸ್ಪೆಕ್ಟರ್ ಕೈಯಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ

ಜನವರಿ 22ರ ನಂತರ ಕರ್ನಾಟಕದ ರಾಮಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಿಂದ 35 ಸಾವಿರ ರಾಮಭಕ್ತರು ಜನವರಿ 31 ರಿಂದ ಮಾರ್ಚ್ 25ರ ವರೆಗೆ ಸುಮಾರು 25 ರೈಲುಗಳಲ್ಲಿ ಅಯೋಧ್ಯೆಗೆ ತಲುಪುತ್ತಾರೆ. ಇದರ ವೆಚ್ಚವನ್ನು ಸ್ವಂತವಾಗಿ ಭರಿಸುತ್ತಾರೆ. ಈ ಅಭಿಯಾನದ ಸಂಚಾಲಕರಾಗಿ ಬಿಜೆಪಿ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಸಹ-ಸಂಚಾಲಕರಾಗಿ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಯೋಧ್ಯೆ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್: ವಿಡಿಯೋ

ಪ್ರತೀ ರಾಮಭಕ್ತರಿಗೆ ಕ್ಯೂ ಆರ್ ಕೋಡ್ ಹೊಂದಿರುವ ಐಡಿ ಕಾರ್ಡನ್ನು ವಿತರಿಸಲಾಗುತ್ತದೆ. ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಿಂದ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಯೋಧ್ಯೆಯಲ್ಲಿ ಕನ್ನಡ ಭಾಷೆಯ ಹೆಲ್ಪ್​ಲೈನ್​​ ಕೇಂದ್ರವಿದ್ದು ಕರ್ನಾಟಕದ ರಾಮಭಕ್ತರಿಗೆ ಕನ್ನಡ ಭಾಷೆಯಲ್ಲೇ ಅನೌನ್ಸ್​ಮೆಂಟ್​​ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಯೋಧ್ಯೆಯಲ್ಲಿ ವಸತಿಗಾಗಿ ವ್ಯವಸ್ಥಿತವಾದ ಜರ್ಮನ್ ಟೆಂಟ್‍ಹೌಸ್‍ಗಳಿದ್ದು, ಸ್ನಾನಗೃಹ, ಶೌಚಾಲಯ ವ್ಯವಸ್ಥೆಗಳಿರುತ್ತದೆ. 48 ಕಡೆ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ 2 ಕಡೆ ಕರ್ನಾಟಕದ ರಾಮಭಕ್ತರಿಗಾಗಿ ಭೋಜನದ ವ್ಯವಸ್ಥೆ ಮಾಡಲಾಗಿದೆ. ಒಂದು ರೈಲಿನಲ್ಲಿ 1,500 ಜನರು ಪ್ರಯಾಣ ಮಾಡಲಿದ್ದಾರೆ. ಪ್ರತೀ ರೈಲಿಗೆ ರೈಲ್ ಪ್ರಮುಖ್ ಮತ್ತು ಬೋಗಿ ಪ್ರಮುಖ್ ಇದ್ದು, ಊಟ ಉಪಚಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಪರಿವರ್ತನಾ ಪಥ ರಾಮಮಂದಿರ ರಥ ಬಿಡುಗಡೆ: ಇದೇ ಸಂದರ್ಭದಲ್ಲಿ ಅವರು ಪರಿವರ್ತನಾ ಪಥ ರಾಮಮಂದಿರ ರಥ ಪುಸ್ತಕವನ್ನು ಬಿಡುಗಡೆ ಮಾಡಿದರು. ಅಯೋಧ್ಯೆಯ ಪ್ರಮುಖ ಘಟನಾವಳಿಗಳನ್ನು ಇದು ಒಳಗೊಂಡಿದೆ. ಕಮಲ ಪಥ ತಂಡವು ಈ ಪುಸ್ತಕವನ್ನು ಸಿದ್ಧಪಡಿಸಿದೆ. ಸುದ್ದಿಗೋಷ್ಠಿ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.