ಮಂಡ್ಯ: ಆಟೋ ಹಾಗೂ ಬೈಕ್ ನಡುವೇ ಡಿಕ್ಕಿಯಾಗಿ ಸ್ಥಳದಲ್ಲೆ ಬೈಕ್ ಸವಾರ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಡಕಲಪುರ ಗೇಟ್ ಬಳಿ ನಡೆದಿದೆ.
ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ದೇವಿರಹಳ್ಳಿ ಗ್ರಾಮದ ರಾಜಣ್ಣ(55) ಮೃತ ವ್ಯಕ್ತಿ. ನಡುಕ ಕಲುಪುರ ಗ್ರಾಮದ ಆಟೋ ಚಾಲಕ ಆನಂದ್ ( 30 ) ಮಂಡ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಬೈಕ್ ಸವಾರನಿಗೆ ಬಲಗಾಲಿನ ಮೂಳೆಗೆ ಪೆಟ್ಟಾಗಿದೆ. ಅಪಘಾತದಲ್ಲಿ ತೀವ್ರ ಗಾಯ ಹಿನ್ನೆಲೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಹಲಗೂರು ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಹಲಗೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.