ETV Bharat / state

ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್ ಮೂಲಕ ಸಾಲ ‌ಸೌಲಭ್ಯ.. ಎಸ್‌ ಟಿ ಸೋಮಶೇಖರ್

author img

By

Published : Jun 30, 2020, 7:17 PM IST

Mandya
ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮ

ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂಪಾಯಿ ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಎಸ್‌.ಟಿ. ಸೋಮಶೇಖರ್ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಸಹಕಾರ ಇಲಾಖೆ ಮುಂದಾಗಿದ್ದು, ಶೀಘ್ರವಾಗಿ ಪ್ರಕಟ ಮಾಡಲಾಗುವುದು..

ಮಂಡ್ಯ : ಕೊರೊನಾ ವಾರಿಯರ್ಸ್​ ಆದ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಸಹಕಾರ ಇಲಾಖೆ ಮುಂದಾಗಿದೆ. ಶೀಘ್ರವಾಗಿ ಪ್ರಕಟ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಘೋಷಣೆ ಮಾಡಿದರು.

ನಗರದ ರೈತ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂಪಾಯಿ ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಭೆಯಲ್ಲಿಯೇ ಘೋಷಣೆ ಮಾಡಿದರು. ಹಲವು ಸಚಿವರು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಶೀಘ್ರ ಸಾಲದ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹದ ಚೆಕ್ ವಿತರಣೆ ಮಾಡಿದರು. ಇದಕ್ಕೂ ಮೊದಲು ಸಚಿವ ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಶ್ ಆಶಾ ಕಾರ್ಯಕರ್ತೆಯರ ಕಾರ್ಯವನ್ನು ಶ್ಲಾಘಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.