ಮಂಡ್ಯ: ಜಿಲ್ಲೆಯಲ್ಲಿ ಭ್ರೂಣ ಪತ್ತೆ, ಹತ್ಯೆ ಇನ್ನೂ ಜೀವಂತವಾಗಿದೆ. ಹೆಣ್ಣು ಮಗು ಜನಿಸುವ ಶಂಕೆಯಿಂದ ಚನ್ನಪಟ್ಟಣ ಮೂಲದ ದಂಪತಿ ಭ್ರೂಣ ಪತ್ತೆಗೆ ಯತ್ನಿಸಿರುವ ಘಟನೆ ನಮ್ಮ ಮನೆ ಪಾಲಿ ಕ್ಲಿನಿಕ್ನಲ್ಲಿ ನಡೆದಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ನಗರದ ವಿವೇಕಾನಂದ ರಸ್ತೆಯಲ್ಲಿರುವ ಕ್ಲಿನಿಕ್ ಮೇಲೆ ಡಿಹೆಚ್ಒ ಡಾ.ಧನಂಜಯ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ದಂಪತಿ ಭ್ರೂಣ ಲಿಂಗ ಪತ್ತೆಗೆ ಬಂದಿದ್ದೇವೆ ಎಂದು ದಂಪತಿ ಒಪ್ಪಿಕೊಂಡಿದ್ದಾರೆ. ಅಲ್ಲದೇ, ನಮಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೂರನೆಯದು ಕೂಡ ಹೆಣ್ಣು ಮಗುವಾಗವ ಅನುಮಾನವಿದೆ. ಹೀಗಾಗಿ ಭ್ರೂಣ ಲಿಂಗ ಪತ್ತೆಗೆ ಬಂದಿದ್ದೇವೆ ಎಂದು ದಂಪತಿ ಹೇಳಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ಮಾಹಿತಿ ನೀಡಿದರು.
ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿಗೆ ಹಲ್ಲೆ : ಮೂವರ ವಿರುದ್ಧ ಪ್ರಕರಣ
ಆರೋಗ್ಯಾಧಿಕಾರಿಯು ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಭ್ರೂಣ ಪತ್ತೆ ಕೃತ್ಯದಲ್ಲಿ ಆಸ್ಪತ್ರೆ ಸಿಬ್ಬಂದಿ ಕೂಡ ಭಾಗಿಯಾಗಿರಬಹುದು ಎನ್ನಲಾಗ್ತಿದೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.