ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಕಾರ್ಯಕರ್ತರು!

author img

By

Published : Sep 17, 2022, 2:33 PM IST

Mnd_17_01

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟಹಬ್ಬದ ಹಿನ್ನೆಲೆ ಬಿಜೆಪಿಯ ಕಾರ್ಯಕರ್ತರು ಬಸ್​ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛಗೊಳಿಸಿದರು.

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ 72ನೇ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಡ್ಯದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ಬಿಜೆಪಿ ಕಾರ್ಯಕರ್ತರು.

ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ ನೇತೃತ್ವದಲ್ಲಿ ಬಸ್ ನಿಲ್ದಾಣದ ಆವರಣ ಹಾಗೂ ಶೌಚಾಲಯ ಸ್ವಚ್ಚಗೊಳಿಸಿದ ಬಿಜೆಪಿ ಕಾರ್ಯಕರ್ತರು ಕಸಗುಡಿಸುವ ಮೂಲಕ ಬಸ್​​ ನಿಲ್ದಾಣವನ್ನು ಸ್ವಚ್ಛ ಗೊಳಿಸಿದರು. ಬಳಿಕ ಪೌರಕಾರ್ಮಿಕರಿಗೆ ಪುಷ್ಪವೃಷ್ಟಿ ಮೂಲಕ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಬಿಜೆಪಿ ಕಾರ್ಯಕರ್ತ ಮಾತನಾಡಿ, ಮೋದಿ ಅವರ ಆಶಯದಂತೆ ಸ್ವಚ್ಚತಾ ಕಾರ್ಯ ಮಾಡುತ್ತಿದ್ದೇವೆ.
ಇನ್ನು ಅವರ ಹುಟ್ಟಿದ ದಿನವಾದ ಇಂದು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬ: ರಕ್ತದಾನ ಮಾಡಿದ ಆರೋಗ್ಯ ಸಚಿವ, ಕಸಗೂಡಿಸಿದ ರೈಲ್ವೆ ಮಂತ್ರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.