ETV Bharat / state

ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು: ಸಿಎಂ

author img

By

Published : Dec 16, 2022, 3:37 PM IST

Updated : Dec 16, 2022, 4:17 PM IST

cm-basavaraj-bommai-talks-in-mandya
ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು: ಸಿಎಂ

ಶಂಕಿತ ಉಗ್ರ ಶಾರಿಕ್​ ವಿಚಾರವಾಗಿ ಡಿಕೆಶಿ ಹೇಳಿಕೆಯನ್ನು ಖಂಡಿಸಿ, ಉಗ್ರರ ವಿಚಾರವಾಗಿ ಕಾಂಗ್ರೆಸ್ ನಿಲುವೇನು?ಎಂದು ಪ್ರಶ್ನಿಸಿದರು.

ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು: ಸಿಎಂ

ಮಂಡ್ಯ: ಉಗ್ರರ ವಿಚಾರದಲ್ಲಿ ಕಾಂಗ್ರೆಸ್​ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್​ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಜಿಲ್ಲೆಯ ಪಾಂಡುಪುರ ತಾಲೂಕಿನಲ್ಲಿ ನಡೆಯುತ್ತಿರುವ ಜನಸಂಕಲ್ಪ ಕಾರ್ಯಕ್ರಮಕ್ಕೆ ಆಗಮಿಸಿದ ಬೊಮ್ಮಾಯಿ ಮಾಧ್ಯಮದೊಂದಿಗೆ ಮಾತನಾಡಿದರು. ಶಂಕಿತ ಉಗ್ರ ಶಾರಿಕ್​ ವಿಚಾರವಾಗಿ ಡಿಕೆಶಿ ಹೇಳಿಕೆಯನ್ನು ಖಂಡಿಸಿ, ಉಗ್ರರ ವಿಚಾರವಾಗಿ ಕಾಂಗ್ರೆಸ್ ನಿಲುವೇನು ಎಂದು ಪ್ರಶ್ನಿಸಿದರು.

ಯಾವುದೇ ಭಯೋತ್ಪಾದಕ ಕೃತ್ಯ ನಡೆದರೂ ಕಾಂಗ್ರೆಸ್ ಇದೇ ರೀತಿ ವರ್ತಿಸುತ್ತಿದೆ. ಇದು ಅವರ ಮನಸ್ಥಿತಿ. ಶಾರಿಕ್ ಭಯೋತ್ಪಾದಕ ಅಲ್ಲದಿದ್ದರೆ, ಎನ್​ಐಎ ತನಿಖೆ ಯಾಕೆ ಸ್ವೀಕರಿಸುತ್ತಿತ್ತು? ಸರ್ಕಾರ ನಡೆಸಿದವರಿಗೆ ಇದು ಗೊತ್ತಿರಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಚಾರ ಡೈವರ್ಟ್​ ಮಾಡುವ ಅಗತ್ಯ ನಮಗಿಲ್ಲ. ಅಲ್ಲದೇ ಶಾರಿಕ್ ವಿಧ್ವಂಸಕ ಕೃತ್ಯಕ್ಕೆ ತಯಾರಾಗಿದ್ದ ಎಂಬುದಕ್ಕೆ ನಮ್ಮಲ್ಲಿ ಸಾಕ್ಷಿಗಳಿವೆ. ಕಾಂಗ್ರೆಸಿಗರಿಗೆ ಹೇಗೆ ಮಾತನಾಡಬೇಕೆಂಬ ಅರಿವಿಲ್ಲ. ಭಾರತ ಮತ್ತು ಚೀನಾ ಗಲಾಟೆಯಲ್ಲೂ ನಮ್ಮ ಯೋಧರ ಮನಸ್ಥಿತಿಯನ್ನು ಕುಗ್ಗಿಸುವ ರೀತಿಯಲ್ಲೇ ಮಾತನಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕುಕ್ಕರ್ ಬ್ಲಾಸ್ಟ್ ಮೂಲಕ ಬಿಜೆಪಿಯಿಂದ ಮತದಾರರ ಮಾಹಿತಿ ಕಳ್ಳತನ ವಿಷಯ ಡೈವರ್ಟ್: ಡಿಕೆಶಿ

Last Updated :Dec 16, 2022, 4:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.