ETV Bharat / state

ಕಾವೇರಿಗಾಗಿ ಮುಂದುವರಿದ ಹೋರಾಟ: ಹೆದ್ದಾರಿ ತಡೆದು ರೈತರ ಆಕ್ರೋಶ

author img

By ETV Bharat Karnataka Team

Published : Nov 7, 2023, 2:45 PM IST

Updated : Nov 7, 2023, 5:38 PM IST

Farmers protest blocking highway for Cauvery: ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿ ಭಾರಿ ಸಭೆ ನಡೆದಾಗಲೂ ತಮಿಳುನಾಡಿಗೆ ನಿರಂತರ ನೀರು ಬಿಡುವಂತೆ ಆದೇಶ ನೀಡುತ್ತಿರುವುದು ಮಂಡ್ಯ ಹಾಗೂ ಮೈಸೂರು ಭಾಗದ ರೈತರಲ್ಲಿ ಆಕ್ರೋಶ ಹೆಚ್ಚಾಗುವಂತೆ ಮಾಡಿದೆ.

Farmers protest blocking highway for Cauvery
ಕಾವೇರಿಗಾಗಿ ಮುಂದುವರೆದ ಹೋರಾಟ: ಹೆದ್ದಾರಿ ತಡೆದು ರೈತರ ಆಕ್ರೋಶ

ಕಾವೇರಿಗಾಗಿ ಮುಂದುವರೆದ ಹೋರಾಟ: ಹೆದ್ದಾರಿ ತಡೆದು ರೈತರ ಆಕ್ರೋಶ

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರದ ಹಾಗೂ ಕರ್ನಾಟಕದ ಹಿತ ಕಾಪಾಡದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಹೋರಾಟ ಮುಂದುವರೆದಿದೆ. ಬೆಂಗಳೂರು ಮೈಸೂರು ಹೆದ್ದಾರಿ ತಡೆ ಮಾಡಿ, ಕಾವೇರಿ ನೀರು ಉಳಿಸಿಕೊಳ್ಳಲು ಮುಂದಾಗದ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಂಕಷ್ಟದ ಸಮಯದಲ್ಲಿ ಮಧ್ಯಪ್ರವೇಶ ಮಾಡದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಕಿಡಿ ಕಾರಿದರು.

ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ 64ನೇ ದಿನದ ನಿರಂತರ ಧರಣಿಯಲ್ಲಿ ಜಿಲ್ಲಾ ರೈತ ಉತ್ಪಾದಕರ ಕಂಪನಿಗಳ ಒಕ್ಕೂಟ, ಸ್ವಾಭಿಮಾನಿ ಒಕ್ಕಲಿಗರ ವೇದಿಕೆ ಹಾಗೂ ಮಹಿಳಾ ಒಕ್ಕೂಟದ ಕಾರ್ಯಕರ್ತರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು. ಕಾವೇರಿ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ, ಆಳುವ ಸರ್ಕಾರಗಳು ಕನ್ನಡ ನಾಡಿನ ಹಿತ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿದಿದ್ದ ಸಿಡಬ್ಲ್ಯೂಆರ್​ಸಿ: ವಾರದ ಹಿಂದೆ ಮತ್ತೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್​ಸಿ) ಆದೇಶ ನೀಡಿತ್ತು. ನವೆಂಬರ್​ 1 ರಿಂದ 15 ರವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್​ ನೀರು ಬಿಡುವಂತೆ ಸಿಡಬ್ಲ್ಯೂಆರ್​ಸಿ ಕರ್ನಾಟಕಕ್ಕೆ ಆದೇಶ ನೀಡಿತ್ತು.

ದೆಹಲಿಯಲ್ಲಿ ಪ್ರತಿ ಬಾರಿ ಸಭೆ ನಡೆದಾಗಲೂ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಒಳಹರಿವು ಕಡಿಮೆ ಇದೆ. ತಮಿಳುನಾಡಿನಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿದೆ, ಇದರಿಂದ ಜಲಾಶಯಗಳು ತುಂಬುತ್ತಿವೆ. ಈ ಎಲ್ಲದರ ಬಗ್ಗೆ ಅರಿವಿದ್ದರೂ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಮತ್ತೆ ತಮಿಳುನಾಡಿಗೆ ನಿರಂತರವಾಗಿ ನೀರು ಬಿಡುವಂತೆ ಆದೇಶವನ್ನು ನೀಡುತ್ತಲೇ ಇದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರು ಆಕ್ರೋಶಗೊಂಡಿದ್ದು, ತಮ್ಮ ಕಾವೇರಿ ಪರ ಹೋರಾಟವನ್ನು ಮುಂದುವರಿಸಿದ್ದಾರೆ.

ಮತ್ತೆ ನೀರು ಹರಿಸುವಂತೆ ಆದೇಶ ಬಂದ ನವೆಂಬರ್​ 1 ರಂದು ಸರ್​ ಎಂ ವಿ ಪ್ರತಿಮೆ ಎದುರು ಧರಣಿ ಸ್ಥಳದಲ್ಲಿ ಸಭೆ ನಡೆಸಿದ್ದ ಜಿಲ್ಲಾ ರೈತ ಹಿತರಕ್ಷನಾ ಸಮಿತಿ, ಕಾವೇರಿ ಹೋರಾಟ ಮುಂದುವರಿಸಲು ನಿರ್ಧರಿಸಿತ್ತು.

ಇದನ್ನೂ ಓದಿ: ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಭೆ: ಕಾವೇರಿ ಹೋರಾಟ ಮುಂದುವರಿಸಲು ನಿರ್ಧಾರ

Last Updated : Nov 7, 2023, 5:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.