ಕೆ.ಆರ್. ಪೇಟೆಯಲ್ಲಿ ಕಾಣಿಸಿಕೊಂಡ ಗಜರಾಜ.. ಬೆಚ್ಚಿಬಿದ್ದ ಜನ

author img

By

Published : Sep 19, 2021, 12:01 PM IST

elephant-caught-crossing-road-in-mandya-leads-tension-over-public

ಕೆ.ಆರ್ ಪೇಟೆ ತಾಲೂಕಿನಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈಗಾಗಲೇ ಆನೆಯನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರತರಾಗಿದ್ದಾರೆ.

ಮಂಡ್ಯ: ಕೆ.ಆರ್ ಪೇಟೆ ತಾಲೂಕಿನ ಪುರ ಗ್ರಾಮದ ಬಳಿ ಆನೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಾಸನದ ಸಕಲೇಶಪುರ ಭಾಗದಿಂದ ದಾರಿ ತಪ್ಪಿ ಕೆ.ಆರ್‌. ಪೇಟೆ ಭಾಗಕ್ಕೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ನಡುರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ

ನಗರ ಪ್ರದೇಶಗಳಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ಕಂಡ ಸಾರ್ವಜನಿಕರು ಆತಂಕಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಆರ್​ಎಫ್​ಓ ಗಂಗಾಧರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ತಂಡ ಆನೆಯನ್ನ ಕಾಡಿಗಟ್ಟಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಓದಿ: ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ: ಇಂದು ಪೊಲೀಸರಿಂದ ಸ್ಥಳ ಮಹಜರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.